ಹೆಲಿಕಾಪ್ಟರ್ ಪತನ ದುರಂತದಲ್ಲಿ ಇತ್ತೀಚೆಗೆ ಸಾವಿಗೀಡಾದ ಸೇನಾಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ಗೆ ಶ್ರದ್ಧಾಂಜಲಿ ಸಲ್ಲಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾವತ್ ಅವರಿಗೆ ಕರ್ನಾಟಕವೆಂದರೆ ವಿಶೇಷ ಅಭಿಮಾನವಿತ್ತು. ಅದರಲ್ಲಿಯೂ ಕೊಡಗಿನ ಯೋಧರ ಬಗ್ಗೆ ಅವರು ವಿಶೇಷ ಗೌರವ ಹೊಂದಿದ್ದರು. ಜನರಲ್ ತಿಮ್ಮಯ್ಯ, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಅವರನ್ನು ಸ್ಫೂರ್ತಿಯಾಗಿ ತೆಗೆದುಕೊಂಡಿದ್ದರು ಎಂದು ಸ್ಮರಿಸಿದರು.