<p><strong>ಬೆಂಗಳೂರು</strong>: ರಾಜ್ಯದಲ್ಲಿ ಆಮ್ಲಜನಕ ಸಿಗದೆ ಕೋವಿಡ್ ರೋಗಿಗಳು ಸಾವಿನ ಕದ ತಟ್ಟುತ್ತಿರುವ ಮಧ್ಯೆಯೇ, ಒಡಿಶಾದ ಟಾಟಾನಗರದಿಂದ ಸೋಮವಾರ ನಸುಕಿನ 3 ಗಂಟೆಗೆ ಹೊರಟ ಒಟ್ಟು 120 ಟನ್ ದ್ರವೀಕೃತ ವೈದ್ಯಕೀಯ ಆಮ್ಲಜನಕದ ಕಂಟೈನರ್ಗಳನ್ನು ಹೊತ್ತ ರೈಲು ಮಂಗಳವಾರ ಬೆಳಿಗ್ಗೆ ವೈಟ್ಫೀಲ್ದ್ ತಲುಪಿದೆ.</p>.<p>ರೈಲು ಅತ್ಯಂತ ತುರ್ತು ಆಗಿ ತಲುಪಬೇಕೆಂಬ ಉದ್ದೇಶದಿಂದ ಗ್ರೀನ್ ಕಾರಿಡಾರ್ ಕಲ್ಪಿಸಲಾಗಿತ್ತು. ತಲಾ 20 ಟನ್ನಂತೆ ದ್ರವೀಕೃತ ವೈದ್ಯಕೀಯ ಆಮ್ಲಜನಕ ತುಂಬಿದ ಆರು ಕಂಟೈನರ್ಗಳ ರೈಲು ವೈಟ್ಫೀಲ್ಡ್ನಲ್ಲಿರುವ ಇನ್ಲ್ಯಾಂಡ್ ಕಂಟೈನರ್ ಡಿಪೋ (ಐಸಿಡಿ) ತಲುಪಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>