ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೋಡಿ: ಕರಾವಳಿಯಲ್ಲಿ ತೌಕ್ತೆ ಅಬ್ಬರ: ದೋಣಿಗಳ ನಡುವೆ ಸಿಲುಕಿ ಮೀನುಗಾರ ಸಾವು, ಹಿಂದೂ ಸ್ಮಶಾನ ಸಮುದ್ರ ಪಾಲು

Last Updated 15 ಮೇ 2021, 11:51 IST
ಅಕ್ಷರ ಗಾತ್ರ

ಮಂಗಳೂರು/ಕಾರವಾರ: ರಾಜ್ಯದ ಕರಾವಳಿಯಲ್ಲಿ ತೌಕ್ತೆ ಚಂಡಮಾರುತದ ಅಬ್ಬರ ಕ್ಷಣ ಕ್ಷಣಕ್ಕೂ ಹೆಚ್ಚಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸೋಮೇಶ್ವರದ ಹಿಂದೂ ಸ್ಮಶಾನ ಸಮುದ್ರ ಪಾಲಾಗಿದೆ. ಸಮುದ್ರದಲ್ಲಿ ದೊಡ್ಡ ದೊಡ್ಡ ಅಲೆಗಳು ಏಳುತ್ತಿದ್ದು, ಶುಕ್ರವಾರ ತಡೆಗೋಡೆಗೆ ಹಾನಿಯಾಗಿತ್ತು. ಶನಿವಾರ ಸ್ಮಶಾನದಲ್ಲಿ ಕಟ್ಟಡ ಕುಸಿದಿದೆ. ಭಟ್ಕಳದ ಜಾಲಿಕೋಡಿಯಲ್ಲಿ ನೀರು ಪಾಲಾಗುತ್ತಿದ್ದ ದೋಣಿಯನ್ನು ದಡಕ್ಕೆ ತರಲು ಹೋದ ಮೀನುಗಾರ, ಎರಡು ದೋಣಿಗಳ ನಡುವೆ ಸಿಲುಕಿ ಮೃತಪಟ್ಟಿದ್ದಾರೆ. ಜಾಲಿಕೋಡಿ ನಿವಾಸಿ ಲಕ್ಷ್ಮಣ ಈರಪ್ಪ ನಾಯ್ಕ (60) ಮೃತರು. ದಡದಲ್ಲಿ ಲಂಗರು ಹಾಕಿದ್ದ ದೋಣಿಯೊಂದು ಅಲೆಗಳ ಹೊಡೆಕ್ಕೆ ನೀರು ಪಾಲಾಗುತ್ತಿತ್ತು. ಅದನ್ನು ತಡೆದು ದಡದಿಂದ ಮೇಲೆ ತರಲು ಅವರು ನೀರಿಗೆ ಇಳಿದ್ದರು. ಆಗ ಅಪ್ಪಳಿಸಿದ ಅಲೆಗೆ ಮತ್ತೊಂದು ದೋಣಿಯು ಅವರನ್ನು ದಡದಿಂದ ಮೇಲೆ ತರಬೇಕಿದ್ದ ದೋಣಿಯ ನಡುವೆ ಸಿಲುಕಿಸಿತು. ಗಂಭೀರವಾಗಿ ಗಾಯಗೊಂಡ ಅವರು ಮೃತಪಟ್ಟರು ಎಂದು ಸ್ಥಳೀಯರು ತಿಳಿಸಿದ್ದಾರೆ. ಅಂಕೋಲಾ ತಾಲ್ಲೂಕಿನ ಹಾರವಾಡದಲ್ಲಿ ಭಾರಿ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸುತ್ತಿವೆ. ಸಮೀಪದ ಗಾಳಿ ಗಿಡಗಳು, ಕಲ್ಲುಗಳು ನೀರು ಪಾಲಾಗುವ ಆತಂಕ ಎದುರಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಮೀನುಗಾರರು ದೋಣಿಗಳನ್ನು ದಡದಿಂದ ಮೇಲೆ ತಂದಿದ್ದಾರೆ. ಗೋಕರ್ಣದ ದುಬ್ಬನಸಸಿ ಹಾಗೂ ಮೇನ್ ಬೀಚ್ ಪ್ರದೇಶದಲ್ಲಿ ಅಲೆಗಳ ಅಬ್ಬರ ಜೋರಾಗಿದೆ. ಗಾಳಿಯ ವೇಗ ಹೆಚ್ಚಿದರೆ ಕಡಲ್ಕೊರೆತ ಉಂಟಾಗುವ ಸಾಧ್ಯತೆಯಿದೆ. ಮಲ್ಪೆ ಸಮುದ್ರದಲ್ಲೂ ದೊಡ್ಡ ದೊಡ್ಡ ಅಲೆಗಳು ಏಳುತ್ತಿವೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ..
https://bit.ly/PrajavaniApp

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT