ದಕ್ಷಿಣ ಕನ್ನಡ ಜಿಲ್ಲೆಯ ನಿಡ್ಡೋಡಿ ಗ್ರಾಮದಲ್ಲಿ ಬಾವಿಗೆ ಬಿದ್ದ ಚಿರತೆಯನ್ನು ಪಶುವೈದ್ಯರ ತಂಡವು ರಕ್ಷಿಸಿದೆ. ಚಿರತೆ ಶನಿವಾರ ಬಾವಿಗೆ ಬಿದ್ದಿತ್ತು. ಚಿರತೆ ರಕ್ಷಣಾ ಕಾರ್ಯಕ್ಕೆ ವನ್ಯಜೀವಿ ರಕ್ಷಣಾ ಕಾರ್ಯದಲ್ಲಿ ಪಳಗಿರುವ ಪಶುವೈದ್ಯರ ಮೊರೆ ಹೋಗಲಾಗಿತ್ತು. ಕೊನೆಗೆ, ಪಶುವೈದ್ಯೆ ಡಾ. ಮೇಘನಾ ಅವರನ್ನು ಬೋನಿನಲ್ಲಿ ಕೂರಿಸಿ, ಬಾವಿಯೊಳಗೆ ಇಳಿಸಿ, ಅಲ್ಲೇ ಅವರು ಚಿರತೆಗೆ ಅರಿವಳಿಕೆ ಮದ್ದು ನೀಡಿ ರಕ್ಷಿಸಿದರು. ರಕ್ಷಣೆ ಮಾಡಿದ ಚಿರತೆಯು ಸುಮಾರು ಒಂದು ವರ್ಷ ಪ್ರಾಯದ್ದು. ಅದನ್ನು ಸುರಕ್ಷಿತ ವಾಗಿ ಮತ್ತೆ ಕಾಡಿಗೆ ಬಿಡಲಾಗಿದೆ.