ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video-ಬಂಡೀಪುರ: ಕೆಸರಿನಲ್ಲಿ ಸಿಲುಕಿದ್ದ ಆನೆ ರಕ್ಷಣೆ

Last Updated 16 ಮೇ 2021, 12:18 IST
ಅಕ್ಷರ ಗಾತ್ರ

ಚಾಮರಾಜನಗರ: ಇಲ್ಲಿನ ಬಂಡೀಪುರ ಹುಲಿ ರಕ್ಷಿತಾರಣ್ಯದ ಮೊಳೆಯೂರು ವಲಯದ ಮೀನಕಟ್ಟೆಯ ಕೆಸರಿನಲ್ಲಿ ಸಿಲುಕಿ ಒದ್ದಾಡುತ್ತಿದ್ದ ಹೆಣ್ಣಾನೆಯೊಂದನ್ನು ಅರಣ್ಯ ಇಲಾಖೆಯ ಸಿಬ್ಬಂದಿ ಶನಿವಾರ ರಕ್ಷಿಸಿದ್ದಾರೆ.

ಎಡೆಬಿಡದೆ ಮಳೆ ಸುರಿಯುತ್ತಿರುವುದರಿಂದ ಕೆರೆಯಲ್ಲಿ ಭಾರಿ ಪ್ರಮಾಣದ ಕೆಸರು ಇತ್ತು. ಇಲ್ಲಿಗೆ ಬಂದ ಆನೆಯು ಕೆಸರಿನಲ್ಲಿ ಸಿಲುಕಿ, ಮೇಲೇಳಲು ಪ್ರಯಾಸ ಪಡುತ್ತಿತ್ತು. ಇದನ್ನು ಕಂಡ ಅರಣ್ಯ ಇಲಾಖೆ ಸಿಬ್ಬಂದಿ ಜೆಸಿಬಿ ಯಂತ್ರದ ಮೂಲಕ ಕೆಸರಿನೊಳಗೆ ಧಾವಿಸಿ, ನಿಧಾನವಾಗಿ ಆನೆಯನ್ನು ಮೇಲೆತ್ತಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT