ಬೆಂಗಳೂರು: ವಿಧಾನ ಪರಿಷತ್ ನಾಟಕೀಯ ಬೆಳವಣಿಗೆಗೆ ಸಾಕ್ಷಿಯಾಗಿದ್ದು, ಸಭಾಪತಿ ಪೀಠದಲ್ಲಿ ಸಭಾಪತಿ ಆಸೀನರಾಗುವುದಕ್ಕಿಂತ ಮೊದಲೇ ಉಪ ಸಭಾಪತಿ ಧರ್ಮೇಗೌಡ ಅವರನ್ನು ಕುಳ್ಳಿರಿಸಿ, ಕಲಾಪ ನಡೆಸಲು ಆಡಳಿತ ರೂಢ ಬಿಜೆಪಿ ಮುಂದಾಗಿದೆ.
ಈ ಸಂದರ್ಭದಲ್ಲಿ ಕಲಾಪದ ಕಾರ್ಯಸೂಚಿ ಕಿತ್ತೆಸೆದು ಘೋಷಣೆ. ಕೈ ಕೈ ಮಿಲಾವಣೆ, ಅವಾಚ್ಯ ಶಬ್ದಗಳಿಂದ ನಿಂದನೆ, ನೂಕಾಟ, ತಳ್ಳಾಟ ನಡೆಯಿತು.