ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ಯೊಂದಿಗೆ ರಾಜ್ಯ ಸರ್ಕಾರದ ನಾಯಕತ್ವ ಬದಲಾವಣೆಯ ಕಸರತ್ತಿನ ಮೊದಲ ಅಂಕಕ್ಕೆ ತೆರೆಬಿದ್ದಿದೆ. ಆದರೆ, ನೂತನ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆ ಈಗ ಎದ್ದು ನಿಂತಿದೆ. ಗಾದಿ ಏರಲು ಹಲವರು ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿದ್ದು, ಬಿಜೆಪಿ ವರಿಷ್ಠರು ಎಲ್ಲರ ಲೆಕ್ಕಾಚಾರವನ್ನೂ ಬದಿಗೆ ಸರಿಸಿ ಅಚ್ಚರಿಯ ಹೆಸರು ಪ್ರಕಟಿಸುವ ಸಾಧ್ಯತೆಯೂ ಇದೆ.