ಮಂಗಳೂರಿನಲ್ಲಿ ನವೆಂಬರ್ 19 ರಂದು ಆಟೋದಲ್ಲಿ ನಡೆದಿದ್ದ ಸ್ಫೋಟ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಗಾಯಗೊಂಡಿದ್ದ ಶಾರೀಕ್ಕೇ ಇದರ ಹಿಂದಿನ ರೂವಾರಿ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ. ಶಾರೀಕ್ ಉಗ್ರ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾನೆ ಎಂಬ ಗುಮಾನಿ ಇದ್ದು ಇದರ ಬಗ್ಗೆ NIA ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.