ರಾಜ್ಯದ ಕರಾವಳಿ, ಮಲೆನಾಡು ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶುಕ್ರವಾರವೂ ವರುಣನ ಆರ್ಭಟ ಮುಂದುವರಿಯಿತು. ಒಂದೆಡೆ, ಭಾರಿ ಮಳೆಯಿಂದ ಬೆಳೆಗಳು– ಮನೆಗಳು ಹಾನಿಗೀಡಾದರೆ, ಇನ್ನೊಂದೆಡೆ, ರಾಜ್ಯದ ನದಿಗಳು– ಜಲಾಶಯಗಳು ಮೈದುಂಬಿ ಹರಿಯುತ್ತಿವೆ. ಉತ್ತರ ಕನ್ನಡ, ಹಾಸನ, ಕಲಬುರಗಿ, ಯಾದಗಿರಿ, ಬೀದರ್ ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ಕೆಲವು ಕಡೆ ಗುಡ್ಡಗಳು ಕುಸಿದಿದ್ದು, ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ.