ರಾಜ್ಯದ ಹಲವೆಡೆ ಮಳೆ ಕೊರತೆ ಕಾರಣ ರೈತರು ಸಂಕಷ್ಟ ಎದುಸಿದ್ದರೆ; ಕಲಬುರಗಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದ ಅಪಾರ ಹಾನಿಯಾಗಿದೆ.ಎರಡೂ ಜಿಲ್ಲೆಗಳಲ್ಲಿ ಈ ವರೆಗೆ 2.64 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದ ಮುಂಗಾರು ಬೆಳೆ ಹಾನಿಯಾಗಿದೆ. ಈ ಬಾರಿ ಉತ್ತಮ ಇಳುವರಿಯ ನಿರೀಕ್ಷೆಯಲ್ಲಿದ್ದ ರೈತರಿಗೆ ಸತತ ಎರಡನೇ ವರ್ಷವೂ ನಿರಾಸೆಯಾಗಿದೆ.