ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೊ ಯಾತ್ರೆಯು ಸೋಮವಾರ ಕೋಟೆ ನಾಡು ಚಿತ್ರದುರ್ಗ ಪ್ರವೇಶಿಸಿತು. ರಾಹುಲ್ ಗಾಂಧಿಯವರ ಜೊತೆ, ಕಾಂಗ್ರೆಸ್ನ ಹಲವು ನಾಯಕರು, ಕಾರ್ಯಕರ್ತರು ಮಳೆಯಲ್ಲಿಯೇ ಹೆಜ್ಜೆ ಹಾಕಿದರು. ಲಂಬಾಣಿ, ದಕ್ಕಲಿಗ, ಸುಡುಗಾಡು ಸಿದ್ದರು, ದೊಂಬಿದಾಸರು, ಕೊರಮರು, ಶಿಳ್ಳೆಕ್ಯಾತ, ಹಂದಿಜೋಗಿ ಸಮುದಾಯದ 25ಕ್ಕೂ ಹೆಚ್ಚು ಪ್ರತಿನಿಧಿಗಳೊಂದಿಗೆ ರಾಹುಲ್ ಗಾಂಧಿ ಸಂವಾದ ನಡೆಸಿದರು.