ಭಾರತ್ ಜೋಡೊ ಯಾತ್ರೆಯು ರಾಜ್ಯದಲ್ಲಿ ಭರದಿಂದ ಸಾಗಿದ್ದು, ರಾಹುಲ್ ಗಾಂಧಿ ಹುರುಪಿನಿಂದಲೇ ಹೆಜ್ಜೆ ಹಾಕುತ್ತಿದ್ದಾರೆ. ಮಂಡ್ಯದಲ್ಲಿ ಸಿದ್ದರಾಮಯ್ಯ ಅವರ ಜೊತೆಗೂಡಿ ಓಡುವ ಮೂಲಕ ಗಮನ ಸೆಳೆದಿದ್ದ ಅವರು, ಸೋಮವಾರ ತುಮಕೂರು–ಚಿತ್ರದುರ್ಗ ಮಾರ್ಗ ಮಧ್ಯೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಕೈಹಿಡಿದು ಓಡಿದರು. ಆ ಮೂಲಕ, ಇಬ್ಬರೂ ನಾಯಕರಿಗೂ ಸಮಾನ ಆದ್ಯತೆ ನೀಡುವ ಕೆಲಸ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಸಂತಸ ವ್ಯಕ್ತಪಡಿಸಿದರು.