ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Watch| ರಾಮಮಂದಿರಕ್ಕೆ ದೇಣಿಗೆ ಕೊಡದವರ ಮನೆಗಳ ಗುರುತು: ಕುಮಾರಸ್ವಾಮಿ ಹೇಳಿದ್ದೇನು?

Last Updated 16 ಫೆಬ್ರುವರಿ 2021, 11:03 IST
ಅಕ್ಷರ ಗಾತ್ರ

ಬೆಂಗಳೂರು: ರಾಮಮಂದಿರಕ್ಕೆ ಹಣ ಸಂಗ್ರಹಿಸುತ್ತಿರುವವರು ಹಣ ಕೊಟ್ಟವರ, ಕೊಡದವರ ಮನೆ ಗುರುತು ಮಾಡುತ್ತಿರುವುದು ತಿಳಿಯಿತು. ಯಾತಕ್ಕೆ ಹೀಗೆ ಮಾಡುತ್ತಿದ್ದಾರೆಂಬುದು ಗೊತ್ತಿಲ್ಲ. ದೇಶದಲ್ಲಿ ನಡೆಯುತ್ತಿರುವ ಈ ಬೆಳವಣಿಗೆ ಎಲ್ಲಿ ತಲುಪುತ್ತದೆ ಗೊತ್ತಿಲ್ಲ ಎಂದು ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಆತಂಕ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ರಾಮಮಂದಿರಕ್ಕೆ ಹಣ ಸಂಗ್ರಹಿಸುತ್ತಿರುವವರು ಹಣ ಕೊಟ್ಟವರ, ಕೊಡದವರ ಮನೆ ಗುರುತು ಮಾಡುತ್ತಿರುವುದು ತಿಳಿಯಿತು. ಯಾತಕ್ಕೆ ಹೀಗೆ ಮಾಡುತ್ತಿದ್ದಾರೆಂಬುದು ಗೊತ್ತಿಲ್ಲ. ಹಿಟ್ಲರ್ ಕಾಲದಲ್ಲಿ ನಾಜಿ-ಯಹೂದಿಗಳಿಗೆ ಗಲಾಟೆ ನಡೆದು ಲಕ್ಷಾಂತರ ಜನರ ಮಾರಣ ಹೋಮ ನಡೆಯಿತು. ದೇಶದಲ್ಲಿ ನಡೆಯುತ್ತಿರುವ ಈ ಬೆಳವಣಿಗೆ ಎಲ್ಲಿ ತಲುಪುತ್ತದೆ ಗೊತ್ತಿಲ್ಲ,' ಎಂದು ಅವರು ಹೇಳಿದ್ದಾರೆ.

'ಜರ್ಮನಿಯಲ್ಲಿ ನಾಜಿ ಹುಟ್ಟಿದ ಕಾಲದಲ್ಲೇ ಆರೆಸ್ಸೆಸ್ ಹುಟ್ಟಿದೆ ಎಂದು ಇತಿಹಾಸಜ್ಞರು ಹೇಳುತ್ತಾರೆ. ಆರೆಸ್ಸೆಸ್‌ ಕೂಡ ಆ ನೀತಿಗಳನ್ನೇ ಜಾರಿ ಮಾಡಿದರೆ ಮುಂದೇನಾಗುತ್ತದೆಂಬ ಆತಂಕವಿದೆ. ದೇಶದಲ್ಲಿ ಮೂಲಭೂತ ಹಕ್ಕನ್ನೆ ಕಸಿಯಲಾಗುತ್ತಿದೆ. ಸ್ವತಂತ್ರವಾಗಿ ಭಾವನೆಗಳನ್ನು ಹಂಚಿಕೊಳ್ಳಲು ಸಾಧ್ಯವಿಲ್ಲದ ಸ್ಥಿತಿ ಇದೆ. ಇದು ಅಘೋಷಿತ ತುರ್ತು ಪರಿಸ್ಥಿತಿ,' ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

'ಯಾರೊಬ್ಬರೂ ತಮ್ಮ ಭಾವನೆಗಳನ್ನು ಹೇಳಿಕೊಳ್ಳಲು ಸಾಧ್ಯವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಮುಂದಿನ ದಿನಗಳಲ್ಲಿ ಮಾಧ್ಯಮಗಳು ಸರ್ಕಾರದ ಭಾವನೆಗಳನ್ನು ಎತ್ತಿಹಿಡಿದರೆ ಯಾರಿಗೆ ಏನಾಗುತ್ತದೆಯೋ ಗೊತ್ತಿಲ್ಲ. ಇನ್ನೂ ಜನಸಾಮಾನ್ಯರ ಪರಿಸ್ಥಿತಿ ಏನಾಗಬಹುದು? ವಾತಾವರಣವನ್ನು ನೋಡಿದಾಗ ದೇಶದಲ್ಲಿ ಏನು ಬೇಕಾದರೂ ಆಗಬಹುದು ಎಂಬುದಂತೂ ನಿಚ್ಚಳವಾಗಿದೆ,' ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ಇದಕ್ಕೂ ಹಿಂದೆ ಶಿವಮೊಗ್ಗದಲ್ಲಿ ಮಾತನಾಡಿದ್ದ ಅವರು ಇದೇ ವಿಚಾರ ಪ್ರಸ್ತಾಪಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT