ಮತಾಂತರದ ಕುರಿತು ವಿಧಾನಸಭೆಯಲ್ಲಿಯೇ ಶಾಸಕ ಗೂಳಿಹಟ್ಟಿ ಶೇಖರ್ ಪ್ರಸ್ತಾಪಿಸಿದ ನಂತರ, ರಾಜ್ಯದಲ್ಲಿ ಚರ್ಚ್ಗಳ ಮೇಲೆ ಸರಣಿ ದಾಳಿ ನಡೆಯುತ್ತಿದೆ ಎಂದು ಆರೋಪಿಸುತ್ತಿದೆ ಕ್ರೈಸ್ತ ಸಮುದಾಯ. ಮುಂದಿನ ವಿಧಾನಮಂಡಲ ಅಧಿವೇಶನದಲ್ಲಿ ಮತಾಂತರ ನಿಷೇಧ ಮಸೂದೆ ಮಂಡಿಸಲು ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಅದಕ್ಕೆ ಪೂರಕವಾಗಿ ಈ ಎಲ್ಲ ಘಟನೆಗಳು ನಡೆಯುತ್ತಿವೆ ಎಂಬ ಆರೋಪ ಕ್ರೈಸ್ತರದ್ದು. ಅಸಹಾಯಕರಿಗೆ, ಮುಗ್ಧರಿಗೆ ಆಮಿಷ ಒಡ್ಡಿ ಮತಾಂತರ ಮಾಡಲಾಗುತ್ತಿದೆ ಎಂದು ದೂರುತ್ತವೆ ಹಿಂದೂಪರ ಸಂಘಟನೆಗಳು. ಇದಕ್ಕೆ ಸಂಬಂಧಿಸಿದಂತೆ ‘ಪ್ರಜಾವಾಣಿ’ ಗ್ರೌಂಡ್ ರಿಪೋರ್ಟ್ ಇಲ್ಲಿದೆ.