ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಅಕ್ರಮವಾಗಿ ಕಟ್ಟಡ ನಿರ್ಮಿಸಿದ್ದರೆ, ಸರ್ಕಾರಕ್ಕೆ ಬಿಟ್ಟುಕೊಡುವೆ: ಸಾ.ರಾ. ಮಹೇಶ್

Last Updated 10 ಜೂನ್ 2021, 6:40 IST
ಅಕ್ಷರ ಗಾತ್ರ

ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಅವರನ್ನು ರಾಜ್ಯ ಸರ್ಕಾರ ಇತ್ತೀಚೆಗೆ ವರ್ಗಾವಣೆ ಮಾಡಿತ್ತು. ಈ ಬಗ್ಗೆ ಮಾತನಾಡಿದ್ದ ರೋಹಿಣಿ ಸಿಂಧೂರಿ, ಭೂ ಮಾಫಿಯಾದಲ್ಲಿ ಭಾಗಿಯಾಗಿರುವವರೆಲ್ಲಾ ಸೇರಿ ತಮ್ಮನ್ನು ಮೈಸೂರಿನಿಂದ ವರ್ಗಾವಣೆ ಮಾಡಿಸಿದರು ಎಂದು ಕಿಡಿ ಕಾರಿದ್ದರು.

ಮಾತ್ರವಲ್ಲದೆ, ‘ಶಾಸಕ ಸಾ.ರಾ.ಮಹೇಶ್‌ ಅವರು ಮೈಸೂರು ಜಿಲ್ಲೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಭೂ ಮಾಫಿಯಾದಲ್ಲಿ ತೊಡಗಿದ್ದಾರೆ. ನಗರದ ದಟ್ಟಗಳ್ಳಿಯಲ್ಲಿ ರಾಜಕಾಲುವೆ ಒತ್ತುವರಿ ಮಾಡಿ ಸಾ.ರಾ.ಚೌಲ್ಟ್ರಿ (ಕಲ್ಯಾಣ ಮಂಟಪ) ನಿರ್ಮಿಸಲಾಗಿದೆ’ ಎಂದು ನೇರ ಆರೋಪ ಮಾಡಿದ್ದರು.

ಸಿಂಧೂರಿ ಹೇಳಿಕೆ ವಿರೋಧಿಸಿ ಸಾ.ರಾ.ಮಹೇಶ್ ಅವರು ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿ ಮುಂದೆ ಪ್ರತಿಭಟನೆ ಆರಂಭಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT