ಬೆಂಗಳೂರು/ಮೈಸೂರು: ಬೆಂಗಳೂರು ಮತ್ತು ಮೈಸೂರಿನಲ್ಲಿ ಪೊಲೀಸ್ ಭದ್ರತೆಯಲ್ಲಿ ಕೆಲ ಸರ್ಕಾರಿ ಬಸ್ಗಳ ಸಂಚಾರ ಆರಂಭಿಸಲಾಗಿದೆ. ಮೆಜೆಸ್ಟಿಕ್ ಬಸ್ ನಿಲ್ದಾಣದಿಂದ ಪೊಲೀಸ್ ಭದ್ರತೆಯಲ್ಲಿ ಕೆಲಸಕ್ಕೆ ಹಾಜರಾದ ಕೆಲವೇ ಕೆಲವು ಸಿಬ್ಬಂದಿಯನ್ನು ಬಳಸಿಕೊಂಡು ಕೆಲವು ಬಿಎಂಟಿಸಿ ಬಸ್ಗಳ ಸಂಚಾರ ನಡೆಸಲಾಗುತ್ತಿದೆ. ಇತ್ತ, ಸ್ಯಾಟಲೈಟ್ ಬಸ್ ನಿಲ್ದಾಣದಿಂದ 25 ಪ್ರಯಾಣಿಕರನ್ನು ಹೊತ್ತ ಐರಾವತ ಬಸ್ ಮೈಸೂರಿನತ್ತ ತೆರಳಿದೆ. ಮೆಜೆಸ್ಟಿಕ್ನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಖಾಸಗಿ ಬಸ್ಗಳ ವ್ಯವಸ್ಥೆ ಸಹ ಮಾಡಲಾಗಿದೆ. ಇತ್ತ, ಮೈಸೂರಿನಲ್ಲೂ ಕೆಲವೇ ಕೆಲವು ಸಿಬ್ಬಂದಿಯನ್ನು ಬಳಸಿಕೊಂಡು ಕೆಲ ಕೆಎಸ್ಆರ್ಟಿಸಿ ಬಸ್ಗಳ ಸಂಚಾರ ಆರಂಭಿಸಲಾಗಿದೆ.