ತೌಕ್ತೆ ಚಂಡಮಾರುತದ ಪ್ರಭಾವ ಭಾನುವಾರವೂ ಮುಂದುವರಿದಿದೆ. ಕರ್ನಾಟಕ, ಕೇರಳ, ಮಹಾರಾಷ್ಟ್ರ, ಗೋವಾ, ತಮಿಳುನಾಡು ಮತ್ತು ಗುಜರಾತ್ ಕರಾವಳಿ ಪ್ರದೇಶಗಳಲ್ಲಿ ಗಾಳಿ ಸಹಿತ ಭಾರಿ ಮಳೆಯಾಗಿದೆ. ಇದರಿಂದಾಗಿ ಅಪಾರ ಪ್ರಮಾಣದ ನಾಶ-ನಷ್ಟ ಅಂದಾಜಿಸಲಾಗಿದೆ. ಹಲವೆಡೆ ಕಡಲಕೊರೆತ ಉಂಟಾಗಿದ್ದು, ತೀರ ಪ್ರದೇಶಗಳಲ್ಲಿ ಮನೆಗಳಿಗೆ ನೀರು ನುಗ್ಗಿದೆ.