<p><strong>ಚಾಮರಾಜನಗರ:</strong> ಪ್ರಸಿದ್ಧ ತೀರ್ಥ ಕ್ಷೇತ್ರ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರೆಗಾಗಿ ಸಿದ್ಧಪಡಿಸಲಾಗಿದ್ದ ಲಾಡು ಪ್ರಸಾದವನ್ನು ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರವು ಸ್ಥಳೀಯರಿಗೆ ಹಾಗೂ ಸುತ್ತ ಮುತ್ತಲ ಗ್ರಾಮಸ್ಥರಿಗೆ ವಿತರಿಸುತ್ತಿದೆ.</p>.<p>ಯುಗಾದಿ ಜಾತ್ರೆಗಾಗಿ 72 ಸಾವಿರ ಲಾಡುಗಳನ್ನು ಸಿದ್ಧಪಡಿಸಲಾಗಿತ್ತು. ಕೊರೊನಾ ವೈರಸ್ ಭೀತಿಯಿಂದ ಜಾತ್ರೆ ರದ್ದಾಗಿರುವುದರಿಂದ ತಯಾರಿಸಿರುವ ಲಾಡುಗಳನ್ನು ಸ್ಥಳೀಯ ಭಕ್ತರಿಗೆ ವಿತರಿಸಲು ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಮ್ಮತಿಸಿದ್ದರು.<br />ಅದರಂತೆ ದೇವಾಲಯಗಳ 550 ಸಿಬ್ಬಂದಿಗೆ ತಲಾ 10 ಲಾಡುಗಳು ಹಾಗೂ ಸ್ಥಳೀಯರಿಗೆ ಹಾಗೂ ಸುತ್ತಮುತ್ತಲ ಗ್ರಾಮಸ್ಥರಿಗೆ ಒಂದೊಂದು ಲಾಡನ್ನು ವಿತರಿಸಲಾಗುತ್ತಿದೆ ಎಂದು ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಜಯ ವಿಭವ ಸ್ವಾಮಿ ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>