ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೇಸಿಗೆಯಲ್ಲಿ ಹೂವರಳಿಸಿದ ಶೃಂಗಾರದ ಹೊಂಗೆಮರ

Last Updated 28 ಮಾರ್ಚ್ 2019, 19:42 IST
ಅಕ್ಷರ ಗಾತ್ರ

ಸುಡುಸುಡು ಬಿಸಿಲು, ನೆಲದ ಎದೆಗುದ್ದಿ ಸೆಖೆಯನ್ನು ಹೊರಕಕ್ಕುತ್ತಿತ್ತು. ಹಬೆಕೊಳವೆಯಿಂದ ಹೊರಬಿಟ್ಟಂತೆ ಬಿಸಿಬಿಸಿ ಗಾಳಿ ಹರಿದಾಡುತ್ತಿರುವ ಹೊತ್ತಿನಲ್ಲಿಯೇ ನಿರ್ದೇಶಕ ಯೋಗರಾಜ ಭಟ್‌ ಅವರು ತಮ್ಮ ಹೊಸ ಸಿನಿಮಾ ‘ಪಂಚತಂತ್ರ’ದ ತಂಡದೊಂದಿಗೆ ‘ಪ್ರಜಾವಾಣಿ’ ಕಚೇರಿಗೆ ದಾಳಿ ಮಾಡಿದರು.

‘ಪಂಚತಂತ್ರ’ ಆಮೆ–ಮೊಲದ ರೇಸ್‌ ಕಥೆಯ ಆಧುನಿಕ ರೂಪವಂತೆ. ಆ ರೇಸ್‌ನ ಕ್ಯುರೇಟರ್‌ನಂತೆ ಕಾಣಿಸುತ್ತಿದ್ದ ಭಟ್ಟರ ಜತೆಗೆ ‘ಮೊಲ’ ಪಕ್ಷದವರು ಮಾತ್ರ ಇದ್ದರು. ಬಹುಶಃ ‘ಆಮೆ’ಗಳಿಗೆ ವಿಶ್ರಾಂತಿ ನೀಡಿರಬೇಕು. ನಾಳೆ ಚಿತ್ರರಂಗದಲ್ಲಿ ಓಟ ಶುರುಮಾಡಬೇಕಲ್ಲ!

ಈ ವಾರದ ‘ಸುಧಾ’ ವಾರಪತ್ರಿಕೆಯ ಹಾಸ್ಯಸಂಚಿಕೆಯಲ್ಲಿ ಬಂದ ತಮ್ಮದೇ ವ್ಯಂಗ್ಯಚಿತ್ರವನ್ನು ನೋಡಿ ‘ಮನಸಾರೆ’ ನಗುತ್ತಾ ಮಾತಿಗೆ ಕೂತ ಅವರು ಮೊದಲು ‘ನಂಗೆ ರಾಜಕೀಯಕ್ಕೆ ಆಗಿಬರೂದಿಲ್ಲ. ನಂಗೆ ಯಾವ ಪಕ್ಷ ಗಿಕ್ಷದ ಬಗ್ಗೆಯೂ ಆಸಕ್ತಿ ಇಲ್ಲ. ಎಲ್ರನ್ನೂ ಒಟ್ಟೊಟ್ಟಿಗೇ ಕಾಲೆಳೆಯೂದು ಅಂದ್ರೆ ಸಿಕ್ಕಾಪಟ್ಟೆ ಖುಷಿ’ ಎಂಬ ಸ್ಪಷ್ಟೀಕರಣ ಕೊಟ್ಟುಕೊಂಡೇ ಮುಂದುವರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT