ನೂತನ ಸಂಸತ್ ಭವನದ ಶಂಕುಸ್ಥಾಪನೆ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯಲು 12ನೇ ಶತಮಾನದಲ್ಲಿ ಬಸವಾದಿ ಶರಣರು ಸ್ಥಾಪಿಸಿದ್ದ ಅನುಭವ ಮಂಟಪವನ್ನು ಪ್ರಸ್ತಾಪಿಸಿದರು. ನಾಡಿನ ಅಭಿವೃದ್ಧಿಗೆ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ವಿಶ್ವದಲ್ಲಿಯೇ ಮೊದಲ ಬಾರಿ ಜಾರಿಗೊಳಿಸಿದ ಕೀರ್ತಿ ಬಸವೇಶ್ವರರಿಗೆ ಸಲ್ಲುತ್ತದೆ ಎಂದು ಬಸವೇಶ್ವರರಿಗೆ ಕನ್ನಡದಲ್ಲೇ ಪ್ರಧಾನಿ ನಮನ ಸಲ್ಲಿಸಿದರು.