ಕಠ್ಮಂಡು: ನೇಪಾಳದಲ್ಲಿ ಸಂಸತ್ ವಿಸರ್ಜನೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ. ಪ್ರತಿಭಟನಾನಿರತ ವಿದ್ಯಾರ್ಥಿ ಸಂಘಟನೆ ಮತ್ತು ನೇಪಾಳ ಕಮ್ಯೂನಿಸ್ಟ್ ಪಕ್ಷದ ಕಾರ್ಯಕರ್ತರು ಸಂಸತ್ ಪ್ರವೇಶಿಸಲು ಯತ್ನಿಸಿದ್ದು ಪೊಲೀಸರು ಅವರನ್ನು ತಡೆದಿದ್ದಾರೆ. ಈ ವೇಳೆ ಘರ್ಷಣೆ ಸಂಭವಿಸಿದೆ. ಪ್ರತಿಭಟನಾ ನಿರತರು ಪ್ರಧಾನಿ ಕೆ.ಪಿ.ಶರ್ಮಾ ಒಲಿ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ಕಾನೂನು, ಸುವ್ಯವಸ್ಥೆ ಕಾಪಾಡಲು ವಿಫಲರಾಗಿರುವ ಪ್ರಧಾನಿ, ಗೃಹಸಚಿವರು ರಾಜೀನಾಮೆ ನೀಡಬೇಕು ಎಂದು ಪ್ರತಿಭಟನಾ ನಿರತರು ಆಗ್ರಹಿಸಿದ್ದಾರೆ. 2020ರ ಡಿಸೆಂಬರ್ 20ರಂದು ಪ್ರಧಾನಿ ಒಲಿ ಅವರು ಸಂಸತ್ ವಿಸರ್ಜಿಸಿದ್ದರು. ಅದಾದ ಬಳಿಕ ನೇಪಾಳದಲ್ಲಿ ಪ್ರತಿಭಟನೆಗಳು ನಡೆಯುತ್ತಲೇ ಇವೆ.