<p><strong>ಬೆಂಗಳೂರು:</strong> ಜೆಟ್ಟಿಂಗ್ ಯಂತ್ರದಿಂದ ರಾಜಕಾಲುವೆಗೆ ಕೊಳಚೆ ನೀರು ಹರಿಸುತ್ತಿದ್ದ ಗುತ್ತಿಗೆದಾರನಿಗೆ ಜಲಮಂಡಳಿಯು ₹1 ಲಕ್ಷ ದಂಡ ವಿಧಿಸಿದೆ.</p>.<p>ಈ ಕುರಿತು ಲಕ್ಷ್ಮೀಕಾಂತ್ ಎಂಬುವರು ನೀಡಿದ್ದ ದೂರಿನ ಆಧಾರದ ಮೇಲೆ ಜಲಮಂಡಳಿ ಈ ಕ್ರಮವನ್ನು ತೆಗೆದುಕೊಂಡಿದೆ.</p>.<p>ರಾಜ ಕಾಲುವೆ ನೀರು ಬೆಳ್ಳಂದೂರು ಕೆರೆಗೆ ಸೇರುತ್ತಿದೆ. ಇಂಥ ಕಾಲುವೆಯಲ್ಲಿ ಕೊಳಚೆ ನೀರನ್ನು ಬಿಡಲಾಗುತ್ತಿತ್ತು. ಇದನ್ನು ಗಮನಿಸಿದ್ದ ಲಕ್ಷ್ಮೀಕಾಂತ್, ಈ ಕುರಿತು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಮತ್ತು ಪೊಲೀಸರಿಗೆ 2018ರ ಅಕ್ಟೋಬರ್ 17ರಂದು ದೂರು ನೀಡಿದ್ದರು. ಗುತ್ತಿಗೆದಾರರ ವಿರುದ್ಧ ತೆಗೆದುಕೊಂಡ ಕ್ರಮದ ಬಗ್ಗೆ ತಿಳಿಸುವಂತೆ ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿಯನ್ನೂ ಸಲ್ಲಿಸಿದ್ದರು.</p>.<p>‘ಪ್ರಕರಣಕ್ಕೆ ಸಂಬಂಧಿಸಿದಂತೆ ಗುತ್ತಿಗೆದಾರನ ಕಡೆಯ ಇಬ್ಬರನ್ನು ಬಂಧಿಸಲಾಗಿತ್ತು. ಅವರ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನೂ ಸಲ್ಲಿಸಲಾಗಿತ್ತು. ಅವರಿಬ್ಬರು ಸದ್ಯ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾರೆ’ ಎಂದು ಪೊಲೀಸರು ಉತ್ತರ ನೀಡಿದ್ದರು.</p>.<p>‘ಗುತ್ತಿಗೆದಾರನಿಗೆ ದಂಡ ನೀಡಿರುವುದು ಸ್ವಾಗತಾರ್ಹ. ಇಂತಹ ಪ್ರಕರಣಗಳು ಮರುಕಳಿಸದಂತೆ ಜಲಮಂಡಳಿ ನೋಡಿಕೊಳ್ಳಬೇಕು’ ಎಂದು ಲಕ್ಷ್ಮೀಕಾಂತ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಜೆಟ್ಟಿಂಗ್ ಯಂತ್ರದಿಂದ ರಾಜಕಾಲುವೆಗೆ ಕೊಳಚೆ ನೀರು ಹರಿಸುತ್ತಿದ್ದ ಗುತ್ತಿಗೆದಾರನಿಗೆ ಜಲಮಂಡಳಿಯು ₹1 ಲಕ್ಷ ದಂಡ ವಿಧಿಸಿದೆ.</p>.<p>ಈ ಕುರಿತು ಲಕ್ಷ್ಮೀಕಾಂತ್ ಎಂಬುವರು ನೀಡಿದ್ದ ದೂರಿನ ಆಧಾರದ ಮೇಲೆ ಜಲಮಂಡಳಿ ಈ ಕ್ರಮವನ್ನು ತೆಗೆದುಕೊಂಡಿದೆ.</p>.<p>ರಾಜ ಕಾಲುವೆ ನೀರು ಬೆಳ್ಳಂದೂರು ಕೆರೆಗೆ ಸೇರುತ್ತಿದೆ. ಇಂಥ ಕಾಲುವೆಯಲ್ಲಿ ಕೊಳಚೆ ನೀರನ್ನು ಬಿಡಲಾಗುತ್ತಿತ್ತು. ಇದನ್ನು ಗಮನಿಸಿದ್ದ ಲಕ್ಷ್ಮೀಕಾಂತ್, ಈ ಕುರಿತು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಮತ್ತು ಪೊಲೀಸರಿಗೆ 2018ರ ಅಕ್ಟೋಬರ್ 17ರಂದು ದೂರು ನೀಡಿದ್ದರು. ಗುತ್ತಿಗೆದಾರರ ವಿರುದ್ಧ ತೆಗೆದುಕೊಂಡ ಕ್ರಮದ ಬಗ್ಗೆ ತಿಳಿಸುವಂತೆ ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿಯನ್ನೂ ಸಲ್ಲಿಸಿದ್ದರು.</p>.<p>‘ಪ್ರಕರಣಕ್ಕೆ ಸಂಬಂಧಿಸಿದಂತೆ ಗುತ್ತಿಗೆದಾರನ ಕಡೆಯ ಇಬ್ಬರನ್ನು ಬಂಧಿಸಲಾಗಿತ್ತು. ಅವರ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನೂ ಸಲ್ಲಿಸಲಾಗಿತ್ತು. ಅವರಿಬ್ಬರು ಸದ್ಯ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾರೆ’ ಎಂದು ಪೊಲೀಸರು ಉತ್ತರ ನೀಡಿದ್ದರು.</p>.<p>‘ಗುತ್ತಿಗೆದಾರನಿಗೆ ದಂಡ ನೀಡಿರುವುದು ಸ್ವಾಗತಾರ್ಹ. ಇಂತಹ ಪ್ರಕರಣಗಳು ಮರುಕಳಿಸದಂತೆ ಜಲಮಂಡಳಿ ನೋಡಿಕೊಳ್ಳಬೇಕು’ ಎಂದು ಲಕ್ಷ್ಮೀಕಾಂತ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>