<p><strong>ವಿಜಯಪುರ:</strong>ಹಣಮಾಪುರ ಜಾಕ್ವೆಲ್ನಿಂದ ಮುಳವಾಡ ಏತ ನೀರಾವರಿ ಯೋಜನೆಯ ಪೂರ್ವ ಹಾಗೂ ಪಶ್ಚಿಮ ಕಾಲುವೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ, ರೈತರು ಜಿಲ್ಲಾಧಿಕಾರಿಗೆ ಗುರುವಾರ ಮನವಿ ಅರ್ಪಿಸಿದರು.</p>.<p>ಬೆಳಗಾವಿ ಪ್ರಾದೇಶಿಕ ಆಯುಕ್ತರ ಆದೇಶದಂತೆ ಈ ಹಿಂದೆ ನೀರು ಹರಿಸಲಾಗಿದ್ದರೂ; 80 ಕಿ.ಮೀ. ಉದ್ದದ ಪಶ್ಚಿಮ ಕಾಲುವೆಯಲ್ಲಿ ಕೇವಲ 40 ಕಿ.ಮೀ.ವರೆಗೆ ಮಾತ್ರ ನೀರು ಹರಿದಿದೆ. ಮುಂದಿನ 40 ಕಿ.ಮೀ. ವ್ಯಾಪ್ತಿಯಲ್ಲಿ ಸುಮಾರು 20 ಗ್ರಾಮಗಳಿದ್ದು, ತೀವ್ರ ಕುಡಿಯುವ ನೀರಿನ ಸಮಸ್ಯೆಯಿದೆ.</p>.<p>ಜಲಾಶಯದಲ್ಲಿ ಸಾಕಷ್ಟು ನೀರಿನ ಲಭ್ಯತೆಯಿರುವ ಈ ಸಂದರ್ಭದಲ್ಲಿ ಪಶ್ಚಿಮ ಕಾಲುವೆಯ ಕೊನೆ ಹಳ್ಳಿಯವರೆಗೂ ನೀರು ಹರಿಸಿ, ಕುಡಿಯುವ ನೀರಿನ ಸಮಸ್ಯೆ ನೀಗಿಸಬೇಕು ಎಂದು ರೈತ ಮುಖಂಡ ಡಾ.ಕೆ.ಎಚ್.ಮುಂಬಾರೆಡ್ಡಿ ಜಿಲ್ಲಾಧಿಕಾರಿಗೆ ವಿನಂತಿಸಿದರು.</p>.<p>ಕಂಬಾಗಿ, ಬೋಳಚಿಕ್ಕಲಕಿ, ನಂದ್ಯಾಳ, ಕಾತ್ರಾಳ, ಗುಣದಾಳ, ಸಂಗಾಪುರ, ಹಣಮಸಾಗರ ಗ್ರಾಮಗಳ ಪರವಾಗಿ ಉಮೇಶ ಮಲ್ಲಣ್ಣವರ, ರಮೇಶ ಬಡ್ರಿ, ಮಲ್ಲು ದಳವಾಯಿ, ಮಹಾದೇವಪ್ಪ ಮದರಖಂಡಿ, ಗಿರಿಮಲ್ಲಪ್ಪ ಮಠಪತಿ, ರಾಮನಿಂಗ ಕೊಕಟನೂರ ಸೇರಿದಂತೆ ಹಲವು ರೈತರು ಜಿಲ್ಲಾಧಿಕಾರಿಗೆ ಮನವಿ ಅರ್ಪಿಸಿದರು.</p>.<p>ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ಎಂ.ಕನಗವಲ್ಲಿ ಬೆಳಗಾವಿ ಪ್ರಾದೇಶಿಕ ಆಯುಕ್ತರಿಗೆ ನಿಮ್ಮ ಮನವಿಯನ್ನು ರವಾನಿಸಿ, ಅಗತ್ಯ ಕ್ರಮ ಜರುಗಿಸುವುದಾಗಿ ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong>ಹಣಮಾಪುರ ಜಾಕ್ವೆಲ್ನಿಂದ ಮುಳವಾಡ ಏತ ನೀರಾವರಿ ಯೋಜನೆಯ ಪೂರ್ವ ಹಾಗೂ ಪಶ್ಚಿಮ ಕಾಲುವೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ, ರೈತರು ಜಿಲ್ಲಾಧಿಕಾರಿಗೆ ಗುರುವಾರ ಮನವಿ ಅರ್ಪಿಸಿದರು.</p>.<p>ಬೆಳಗಾವಿ ಪ್ರಾದೇಶಿಕ ಆಯುಕ್ತರ ಆದೇಶದಂತೆ ಈ ಹಿಂದೆ ನೀರು ಹರಿಸಲಾಗಿದ್ದರೂ; 80 ಕಿ.ಮೀ. ಉದ್ದದ ಪಶ್ಚಿಮ ಕಾಲುವೆಯಲ್ಲಿ ಕೇವಲ 40 ಕಿ.ಮೀ.ವರೆಗೆ ಮಾತ್ರ ನೀರು ಹರಿದಿದೆ. ಮುಂದಿನ 40 ಕಿ.ಮೀ. ವ್ಯಾಪ್ತಿಯಲ್ಲಿ ಸುಮಾರು 20 ಗ್ರಾಮಗಳಿದ್ದು, ತೀವ್ರ ಕುಡಿಯುವ ನೀರಿನ ಸಮಸ್ಯೆಯಿದೆ.</p>.<p>ಜಲಾಶಯದಲ್ಲಿ ಸಾಕಷ್ಟು ನೀರಿನ ಲಭ್ಯತೆಯಿರುವ ಈ ಸಂದರ್ಭದಲ್ಲಿ ಪಶ್ಚಿಮ ಕಾಲುವೆಯ ಕೊನೆ ಹಳ್ಳಿಯವರೆಗೂ ನೀರು ಹರಿಸಿ, ಕುಡಿಯುವ ನೀರಿನ ಸಮಸ್ಯೆ ನೀಗಿಸಬೇಕು ಎಂದು ರೈತ ಮುಖಂಡ ಡಾ.ಕೆ.ಎಚ್.ಮುಂಬಾರೆಡ್ಡಿ ಜಿಲ್ಲಾಧಿಕಾರಿಗೆ ವಿನಂತಿಸಿದರು.</p>.<p>ಕಂಬಾಗಿ, ಬೋಳಚಿಕ್ಕಲಕಿ, ನಂದ್ಯಾಳ, ಕಾತ್ರಾಳ, ಗುಣದಾಳ, ಸಂಗಾಪುರ, ಹಣಮಸಾಗರ ಗ್ರಾಮಗಳ ಪರವಾಗಿ ಉಮೇಶ ಮಲ್ಲಣ್ಣವರ, ರಮೇಶ ಬಡ್ರಿ, ಮಲ್ಲು ದಳವಾಯಿ, ಮಹಾದೇವಪ್ಪ ಮದರಖಂಡಿ, ಗಿರಿಮಲ್ಲಪ್ಪ ಮಠಪತಿ, ರಾಮನಿಂಗ ಕೊಕಟನೂರ ಸೇರಿದಂತೆ ಹಲವು ರೈತರು ಜಿಲ್ಲಾಧಿಕಾರಿಗೆ ಮನವಿ ಅರ್ಪಿಸಿದರು.</p>.<p>ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ಎಂ.ಕನಗವಲ್ಲಿ ಬೆಳಗಾವಿ ಪ್ರಾದೇಶಿಕ ಆಯುಕ್ತರಿಗೆ ನಿಮ್ಮ ಮನವಿಯನ್ನು ರವಾನಿಸಿ, ಅಗತ್ಯ ಕ್ರಮ ಜರುಗಿಸುವುದಾಗಿ ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>