<p><strong>ಬಾಮಾಕೊ (ಮಾಲಿ): </strong>ವಾಹನವೊಂದರಲ್ಲಿ ಬಾಂಬ್ ಸ್ಫೋಟಿಸಿದ ಪರಿಣಾಮ ವಿಶ್ವಸಂಸ್ಥೆಯ ಮೂವರು ಶಾಂತಿಪಾಲಕರು ಮೃತಪಟ್ಟ ಘಟನೆ ಮಾಲಿಯ ಟಿಂಬಕ್ಟು ಪ್ರಾಂತ್ಯದಲ್ಲಿ ನಡೆದಿದೆ. ಈ ಮೂವರು ಮೂಲತಃ ಐವರಿ ಕೋಸ್ಟ್ನ ನಿವಾಸಿಗಳು.</p>.<p>‘ಬುಧವಾರ ಡೌಯೆಂಟ್ಜಾ ಮತ್ತು ಟಿಂಬಕ್ಟುನಲ್ಲಿ ಭದ್ರತಾ ಪಡೆಯು ಕಾರ್ಯಾಚರಣೆ ನಡೆಸಿತ್ತು. ಈ ವೇಳೆ ವಾಹನವೊಂದರಲ್ಲಿ ಬಾಂಬ್ ಸ್ಫೋಟಿಸಿದೆ. ಇದೇ ವೇಳೆಬಂದೂಕುಧಾರಿಗಳು ಕೂಡ ಗುಂಡು ಚಲಾಯಿಸಿದ್ದಾರೆ. ಈ ದಾಳಿಯಲ್ಲಿ ಮೂರು ಮಂದಿ ಮೃತಪಟ್ಟಿದ್ದು,ಆರು ಜನರಿಗೆ ಗಾಯಗಳಾಗಿವೆ’ ಎಂದು ಮಿನುಸ್ಮಾ ಮಿಷನ್ ಹೇಳಿದೆ.</p>.<p>‘ದಾಳಿಕೋರರು ತಕ್ಷಣವೇ ಘಟನಾ ಸ್ಥಳದಿಂದ ಪರಾರಿಯಾಗಿದ್ದಾರೆ. ಸದ್ಯ ಹೆಲಿಕಾಪ್ಟರ್ ಮೂಲಕ ರಕ್ಷಣಾ ಕಾರ್ಯ ಮುಂದುವರಿದಿದೆ’ ಎಂದು ಮಿನುಸ್ಮಾ ಮಿಷನ್ ಮಾಹಿತಿ ನೀಡಿದೆ.</p>.<p>ವಿಶ್ವಸಂಸ್ಥೆಯ ವಿಶೇಷ ರಾಯಭಾರಿ, ಮಿಷನ್ ಮುಖ್ಯಸ್ಥ ಮಹಾಮತ್ ಸಲೇಹ್ ಅನ್ನದಿಫ್, ದಾಳಿಗೆ ಖಂಡನೆ ವ್ಯಕ್ತಪಡಿಸಿದ್ದಾರೆ.</p>.<p>‘ವಿಶ್ವಸಂಸ್ಥೆಯ ಮಹಾ ಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗುಟೆರಸ್ ಈ ದಾಳಿಯನ್ನು ಖಂಡಿಸಿದ್ದಾರೆ. ವಿಶ್ವಸಂಸ್ಥೆಯ ಶಾಂತಿಪಾಲಕರ ಮೇಲೆ ನಡೆಸಿರುವ ದಾಳಿ ಯುದ್ಧ ಅಪರಾಧವಾಗಿದೆ ಎಂದು ಅವರು ಹೇಳಿದ್ದಾರೆ’ ಎಂದು ವಿಶ್ವಸಂಸ್ಥೆಯ ವಕ್ತಾರ ಸ್ಟೀಫನ್ ಡುಜರಿಕ್ ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಮಾಕೊ (ಮಾಲಿ): </strong>ವಾಹನವೊಂದರಲ್ಲಿ ಬಾಂಬ್ ಸ್ಫೋಟಿಸಿದ ಪರಿಣಾಮ ವಿಶ್ವಸಂಸ್ಥೆಯ ಮೂವರು ಶಾಂತಿಪಾಲಕರು ಮೃತಪಟ್ಟ ಘಟನೆ ಮಾಲಿಯ ಟಿಂಬಕ್ಟು ಪ್ರಾಂತ್ಯದಲ್ಲಿ ನಡೆದಿದೆ. ಈ ಮೂವರು ಮೂಲತಃ ಐವರಿ ಕೋಸ್ಟ್ನ ನಿವಾಸಿಗಳು.</p>.<p>‘ಬುಧವಾರ ಡೌಯೆಂಟ್ಜಾ ಮತ್ತು ಟಿಂಬಕ್ಟುನಲ್ಲಿ ಭದ್ರತಾ ಪಡೆಯು ಕಾರ್ಯಾಚರಣೆ ನಡೆಸಿತ್ತು. ಈ ವೇಳೆ ವಾಹನವೊಂದರಲ್ಲಿ ಬಾಂಬ್ ಸ್ಫೋಟಿಸಿದೆ. ಇದೇ ವೇಳೆಬಂದೂಕುಧಾರಿಗಳು ಕೂಡ ಗುಂಡು ಚಲಾಯಿಸಿದ್ದಾರೆ. ಈ ದಾಳಿಯಲ್ಲಿ ಮೂರು ಮಂದಿ ಮೃತಪಟ್ಟಿದ್ದು,ಆರು ಜನರಿಗೆ ಗಾಯಗಳಾಗಿವೆ’ ಎಂದು ಮಿನುಸ್ಮಾ ಮಿಷನ್ ಹೇಳಿದೆ.</p>.<p>‘ದಾಳಿಕೋರರು ತಕ್ಷಣವೇ ಘಟನಾ ಸ್ಥಳದಿಂದ ಪರಾರಿಯಾಗಿದ್ದಾರೆ. ಸದ್ಯ ಹೆಲಿಕಾಪ್ಟರ್ ಮೂಲಕ ರಕ್ಷಣಾ ಕಾರ್ಯ ಮುಂದುವರಿದಿದೆ’ ಎಂದು ಮಿನುಸ್ಮಾ ಮಿಷನ್ ಮಾಹಿತಿ ನೀಡಿದೆ.</p>.<p>ವಿಶ್ವಸಂಸ್ಥೆಯ ವಿಶೇಷ ರಾಯಭಾರಿ, ಮಿಷನ್ ಮುಖ್ಯಸ್ಥ ಮಹಾಮತ್ ಸಲೇಹ್ ಅನ್ನದಿಫ್, ದಾಳಿಗೆ ಖಂಡನೆ ವ್ಯಕ್ತಪಡಿಸಿದ್ದಾರೆ.</p>.<p>‘ವಿಶ್ವಸಂಸ್ಥೆಯ ಮಹಾ ಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗುಟೆರಸ್ ಈ ದಾಳಿಯನ್ನು ಖಂಡಿಸಿದ್ದಾರೆ. ವಿಶ್ವಸಂಸ್ಥೆಯ ಶಾಂತಿಪಾಲಕರ ಮೇಲೆ ನಡೆಸಿರುವ ದಾಳಿ ಯುದ್ಧ ಅಪರಾಧವಾಗಿದೆ ಎಂದು ಅವರು ಹೇಳಿದ್ದಾರೆ’ ಎಂದು ವಿಶ್ವಸಂಸ್ಥೆಯ ವಕ್ತಾರ ಸ್ಟೀಫನ್ ಡುಜರಿಕ್ ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>