ಅಪಹರಣಕ್ಕೊಳಗಾದ ಭಾರತೀಯರು ಆಂಧ್ರ ಪ್ರದೇಶ, ಬಿಹಾರ, ಗುಜರಾತ್ ಮತ್ತು ಉತ್ತರ ಪ್ರದೇಶಕ್ಕೆ ಸೇರಿದವರು. ಸೆಪ್ಟೆಂಬರ್ 14ರಂದು ಭಾರತಕ್ಕೆ ಹಿಂತಿರುಗಲು ತ್ರಿಪೋಲಿ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ಮಾರ್ಗದಲ್ಲಿ ಅಶ್ವೆರಿಫ್ ಪ್ರದೇಶದಲ್ಲಿ ಭಾರತೀಯರು ಅಪಹರಣಕ್ಕೊಳಗಾಗಿದ್ದರು. ಇವರೆಲ್ಲರೂ ಕಟ್ಟಡ ನಿರ್ಮಾಣ ಮತ್ತು ತೈಲ ಸರಬರಾಜು ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.