ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮ್ಯಾನ್ಮಾರ್‌‌ನಿಂದ 37,000 ಜನರು ಭಾರತಕ್ಕೆ ಪಲಾಯನ– ವಿಶ್ವಸಂಸ್ಥೆ

ದೇಶದಲ್ಲಿ ಆಂತರಿಕ ಸಂಘರ್ಷ ಮತ್ತೆ ಹೆಚ್ಚಾಗುವ ಆತಂಕ
Last Updated 3 ನವೆಂಬರ್ 2021, 5:28 IST
ಅಕ್ಷರ ಗಾತ್ರ

ವಿಶ್ವಸಂಸ್ಥೆ: ಮ್ಯಾನ್ಮಾರ್‌ನಲ್ಲಿ ಆಂತರಿಕ ಸಂಘರ್ಷ ಮತ್ತೆ ಹೆಚ್ಚುವ ಆತಂಕದಿಂದ ದೇಶದ ವಾಯವ್ಯ ಭಾಗದ 37,000 ಜನರು ಮನೆಗಳನ್ನು ತೊರೆದಿದ್ದಾರೆ. ಈ ಪೈಕಿ ಅಧಿಕ ಸಂಖ್ಯೆಯ ಜನರು ಭಾರತಕ್ಕೆ ಪಲಾಯನ ಮಾಡಿರುವ ಸಾಧ್ಯತೆಗಳಿವೆ ಎಂದು ವಿಶ್ವಸಂಸ್ಥೆ ತಿಳಿಸಿದೆ.

‘ದೇಶದ ವಾಯವ್ಯ ಭಾಗದಲ್ಲಿ ಮ್ಯಾನ್ಮಾರ್‌ ಮಿಲಿಟರಿ ಹಾಗೂ ಸ್ಥಳೀಯ ಪಾಪ್ಯುಲರ್ ಡಿಫೆನ್ಸ್‌ ಫೋರ್ಸ್‌ ನಡುವೆ ಇತ್ತೀಚೆಗೆ ಕದನ ಶುರುವಾಗಿದ್ದು, ಇದು ಹೆಚ್ಚಾಗುವ ಆತಂಕ ಇದೆ. ಇದರಿಂದಾಗಿ ಚಿನ್‌, ಮ್ಯಾಗ್ವೆ ಹಾಗೂ ಸಗಾಯಿಂಗ್‌ ರಾಜ್ಯಗಳಲ್ಲಿನ ಪರಿಸ್ಥಿತಿ ಕಳವಳಕಾರಿಯಾಗಿದೆ’ ಎಂದು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆ್ಯಂಟೊನಿಯೊ ಗುಟೆರಸ್‌ ಅವರ ಸಹವಕ್ತಾರರಾದ ಫ್ಲಾರೆನ್ಸಿಯಾ ಸೊಟೊ ನಿನೊ ಹೇಳಿದ್ದಾರೆ.

‘ಈ ಸಂಘರ್ಷದ ಪರಿಣಾಮವಾಗಿ ಜನರು ಮನೆಗಳನ್ನು ತೊರೆದು, ಸುರಕ್ಷಿತ ತಾಣಗಳನ್ನು ಅರಸಿ ಓಡಿ ಹೋಗುತ್ತಿದ್ದಾರೆ. ಆಸ್ತಿಗಳಿಗೆ ಹಾನಿಯುಂಟಾಗಿದೆ. ಪಶ್ಚಿಮ ಚಿನ್‌ ರಾಜ್ಯದ ಥತ್ಲಾಂಗ್‌ ಪಟ್ಟಣದಲ್ಲಿ 160ಕ್ಕೂ ಹೆಚ್ಚು ಮನೆಗಳಿಗೆ ಬೆಂಕಿ ಹಚ್ಚಿರುವ ಆತಂಕಕಾರಿ ಘಟನೆ ನಡೆದಿದೆ’ ಎಂದು ಅವರು ಹೇಳಿದ್ದಾರೆ.

‘ಮಹಿಳೆಯರು ಹಾಗೂ ಮಕ್ಕಳು ಸೇರಿದಂತೆ 37,000 ಜನರು ಮನೆಗಳನ್ನು ತೊರೆದಿದ್ದಾರೆ. 2019ರಲ್ಲಿ ಕಂಡು ಬಂದ ಮಿಲಿಟರಿ ದಂಗೆ ಹಾಗೂ ನಂತರದ ಸಂಘರ್ಷದಿಂದಾಗಿ ಆಗ 7 ಸಾವಿರಕ್ಕೂ ಅಧಿಕ ಜನರು ಮನೆಗಳನ್ನು ತೊರೆದಿದ್ದರು’ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT