<p><strong>ಕೊಲಂಬೊ</strong>: ಫ್ಯಾಸಿಸ್ಟರು ಸರ್ಕಾರವನ್ನು ವಶಪಡಿಸಿಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ಶ್ರೀಲಂಕಾದ ಹಂಗಾಮಿ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ ಬುಧವಾರ ವಾಗ್ದಾಳಿ ನಡೆಸಿದ್ದಾರೆ.</p>.<p>ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸ ಮಾಲ್ಡೀವ್ಸ್ಗೆ ಪಲಾಯನಗೈದ ನಂತರ ದೇಶದಾದ್ಯಂತ ಪ್ರತಿಭಟನೆಗಳು ತೀವ್ರಗೊಂಡಿವೆ. ಭದ್ರತಾ ಪಡೆಗಳ ಮೇಲೆ ಆಕ್ರೋಶಭರಿತ ನಾಗರಿಕರು ದಾಳಿ ನಡೆಸುತ್ತಿದ್ದಾರೆ. ಇದೇ ವೇಳೆ, ಕೊಲಂಬೊದಲ್ಲಿರುವ ಪ್ರಧಾನಿ ಕಚೇರಿಯನ್ನು ಪ್ರತಿಭಟನಾಕಾರರು ವಶಕ್ಕೆ ಪಡೆದುಕೊಂಡಿದ್ದಾರೆ.</p>.<p>ಶ್ರೀಲಂಕಾದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಹೇಳಿಕೆ ನೀಡಿರುವ ಹಂಗಾಮಿ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ, ದೇಶದಲ್ಲಿ ಶಾಂತಿ–ಸುವ್ಯವಸ್ಥೆ ಕಾಪಾಡುವಂತೆ ಶ್ರೀಲಂಕಾದ ಸೇನೆ ಮತ್ತು ಪೋಲೀಸರಿಗೆ ಆದೇಶಿಸಿದ್ದಾರೆ.</p>.<p><strong>ಇದನ್ನೂ ಓದಿ– </strong><a href="https://www.prajavani.net/world-news/srilankan-prime-minister-office-taken-over-by-protesters-in-colombo-953966.html" target="_blank"><strong>ಶ್ರೀಲಂಕಾ: ತುರ್ತು ಪರಿಸ್ಥಿತಿ ನಡುವೆಯೇ ಪ್ರಧಾನಿ ಕಚೇರಿ ವಶಕ್ಕೆ ಪಡೆದ ನಾಗರಿಕರು</strong></a></p>.<p>ಇದೇ ವೇಳೆ ಪ್ರತಿಭಟನಾಕಾರರು ಹಾಗೂ ಪ್ರತಿಪಕ್ಷಗಳ ನಾಯಕರನ್ನು ಗುರಿಯಾಗಿಸಿ ವಾಗ್ದಾಳಿ ನಡೆಸಿರುವ ಅವರು, ‘ಶ್ರೀಲಂಕಾ ಸರ್ಕಾರವನ್ನು ವಶಪಡಿಸಿಕೊಳ್ಳುವ ಯತ್ನ ಪ್ಯಾಸಿಸ್ಟ್ರಿಂದ ನಡೆಯುತ್ತಿದೆ’ ಎಂದು ಹೇಳಿದ್ದಾರೆ.</p>.<p>ಮೇ ತಿಂಗಳಲ್ಲಿ ಪ್ರಧಾನಿಯಾಗಿ ರಾನಿಲ್ ವಿಕ್ರಮಸಿಂಘೆ ಅಧಿಕಾರ ವಹಿಸಿಕೊಂಡಿದ್ದರು. ಅವರನ್ನು ಇಂದು(ಬುಧವಾರ) ಶ್ರೀಲಂಕಾದ ಹಂಗಾಮಿ ಅಧ್ಯಕ್ಷರನ್ನಾಗಿ ಘೋಷಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಲಂಬೊ</strong>: ಫ್ಯಾಸಿಸ್ಟರು ಸರ್ಕಾರವನ್ನು ವಶಪಡಿಸಿಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ಶ್ರೀಲಂಕಾದ ಹಂಗಾಮಿ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ ಬುಧವಾರ ವಾಗ್ದಾಳಿ ನಡೆಸಿದ್ದಾರೆ.</p>.<p>ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸ ಮಾಲ್ಡೀವ್ಸ್ಗೆ ಪಲಾಯನಗೈದ ನಂತರ ದೇಶದಾದ್ಯಂತ ಪ್ರತಿಭಟನೆಗಳು ತೀವ್ರಗೊಂಡಿವೆ. ಭದ್ರತಾ ಪಡೆಗಳ ಮೇಲೆ ಆಕ್ರೋಶಭರಿತ ನಾಗರಿಕರು ದಾಳಿ ನಡೆಸುತ್ತಿದ್ದಾರೆ. ಇದೇ ವೇಳೆ, ಕೊಲಂಬೊದಲ್ಲಿರುವ ಪ್ರಧಾನಿ ಕಚೇರಿಯನ್ನು ಪ್ರತಿಭಟನಾಕಾರರು ವಶಕ್ಕೆ ಪಡೆದುಕೊಂಡಿದ್ದಾರೆ.</p>.<p>ಶ್ರೀಲಂಕಾದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಹೇಳಿಕೆ ನೀಡಿರುವ ಹಂಗಾಮಿ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ, ದೇಶದಲ್ಲಿ ಶಾಂತಿ–ಸುವ್ಯವಸ್ಥೆ ಕಾಪಾಡುವಂತೆ ಶ್ರೀಲಂಕಾದ ಸೇನೆ ಮತ್ತು ಪೋಲೀಸರಿಗೆ ಆದೇಶಿಸಿದ್ದಾರೆ.</p>.<p><strong>ಇದನ್ನೂ ಓದಿ– </strong><a href="https://www.prajavani.net/world-news/srilankan-prime-minister-office-taken-over-by-protesters-in-colombo-953966.html" target="_blank"><strong>ಶ್ರೀಲಂಕಾ: ತುರ್ತು ಪರಿಸ್ಥಿತಿ ನಡುವೆಯೇ ಪ್ರಧಾನಿ ಕಚೇರಿ ವಶಕ್ಕೆ ಪಡೆದ ನಾಗರಿಕರು</strong></a></p>.<p>ಇದೇ ವೇಳೆ ಪ್ರತಿಭಟನಾಕಾರರು ಹಾಗೂ ಪ್ರತಿಪಕ್ಷಗಳ ನಾಯಕರನ್ನು ಗುರಿಯಾಗಿಸಿ ವಾಗ್ದಾಳಿ ನಡೆಸಿರುವ ಅವರು, ‘ಶ್ರೀಲಂಕಾ ಸರ್ಕಾರವನ್ನು ವಶಪಡಿಸಿಕೊಳ್ಳುವ ಯತ್ನ ಪ್ಯಾಸಿಸ್ಟ್ರಿಂದ ನಡೆಯುತ್ತಿದೆ’ ಎಂದು ಹೇಳಿದ್ದಾರೆ.</p>.<p>ಮೇ ತಿಂಗಳಲ್ಲಿ ಪ್ರಧಾನಿಯಾಗಿ ರಾನಿಲ್ ವಿಕ್ರಮಸಿಂಘೆ ಅಧಿಕಾರ ವಹಿಸಿಕೊಂಡಿದ್ದರು. ಅವರನ್ನು ಇಂದು(ಬುಧವಾರ) ಶ್ರೀಲಂಕಾದ ಹಂಗಾಮಿ ಅಧ್ಯಕ್ಷರನ್ನಾಗಿ ಘೋಷಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>