<p><strong>ನವದೆಹಲಿ: </strong>ಅಫ್ಗಾನಿಸ್ತಾನದ ನೆಲವನ್ನು ಬೇರೆ ದೇಶದ ಮೇಲೆ ಭಯೋತ್ಪಾದನೆ ನಡೆಸಲು ಬಳಸಿಕೊಳ್ಳಬಾರದು ಎಂದು ಬ್ರಿಕ್ಸ್ ಸಂಘಟನೆ ಒತ್ತಾಯಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಬ್ರಿಕ್ಸ್ ಶೃಂಗಸಭೆಯಲ್ಲಿ ಐದೂ ಸದಸ್ಯ ರಾಷ್ಟ್ರಗಳು ಅಫ್ಗನ್ನಲ್ಲಿನ ಸ್ಥಿತಿ ಬಗ್ಗೆ ಕಳವಳ ವ್ಯಕ್ತಪಡಿಸಿದೆ.</p>.<p>ಭಾರತವು ಆಯೋಜಿಸಿದ್ದ ಸಭೆಯಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಚೀನಾ ಅಧ್ಯಕ್ಷ ಷಿ-ಜಿನ್ಪಿಂಗ್, ದಕ್ಷಿಣ ಆಫ್ರಿಕಾ ಅಧ್ಯಕ್ಷ ಸಿರಿಲ್ ರಾಮಾಫೋಸಾ ಮತ್ತು ಬ್ರೆಜಿಲ್ ಅಧ್ಯಕ್ಷ ಜೈರ್ ಬೊಲ್ಸಾನ್ಯಾರೋ ಭಾಗಿಯಾಗಿದ್ದರು.</p>.<p>ಅಫ್ಗಾನಿಸ್ತಾನದಲ್ಲಿನ ಹಿಂಸಾಚಾರವನ್ನು ಕೊನೆಗೊಳಿಸಿ, ಶಾಂತಿ ಸ್ಥಾಪಿಸಬೇಕಿದೆ. ಅಫ್ಗಾನಿಸ್ತಾನದಲ್ಲಿ ಸುಸ್ಥಿರತೆ, ಶಾಂತಿ, ಕಾನೂನು ಮತ್ತು ಸುವ್ಯವಸ್ಥೆಯನ್ನು ಸ್ಥಾಪಿಸಲು ಅಫ್ಗನ್ ಅನ್ನೂ ಒಳಗೊಂಡು ಮಾತುಕತೆ ನಡೆಸಬೇಕು ಎಂದು ಶೃಂಗಸಭೆಯ ಅಂತ್ಯದಲ್ಲಿ ಘೋಷಣೆ ಹೊರಡಿಸಲಾಗಿದೆ.</p>.<p>‘ಭಯೋತ್ಪಾದನೆಯನ್ನು ತಡೆಗಟ್ಟುವುದು ಆದ್ಯತೆಯಾಗಬೇಕು. ಬೇರೆ ದೇಶಗಳ ಮೇಲೆ ಭಯೋತ್ಪಾದನೆ ನಡೆಸಲು ಅಫ್ಗನ್ ನೆಲವನ್ನು ಬಳಸಿಕೊಳ್ಳುವುದನ್ನು ತಡೆಯಬೇಕಿದೆ. ಅಫ್ಗಾನಿಸ್ತಾನದ ಮೂಲಕ ನಡೆಯುವ ಮಾದಕ ವಸ್ತುಗಳ ಕಳ್ಳಸಾಗಣೆಯನ್ನೂ ತಡೆಗಟ್ಟಬೇಕು’ ಎಂದು ಘೋಷಣೆಯಲ್ಲಿ ವಿವರಿಸಲಾಗಿದೆ.</p>.<p>ಭಯೋತ್ಪಾದನೆ ತಡೆಗಟ್ಟಲು ಬ್ರಿಕ್ಸ್ ಕಾರ್ಯ ಯೋಜನೆಗೆ ಸದಸ್ಯ ರಾಷ್ಟ್ರಗಳು ಅನುಮೋದನೆ ನೀಡಿವೆ. ಅದನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಬದ್ಧವಾಗಿರುವುದಾಗಿ ಘೋಷಿಸಿವೆ. ಯಾವುದೇ ಧರ್ಮ, ರಾಷ್ಟ್ರ, ನಾಗರಿಕತೆ ಮತ್ತು ಸಾಂಸ್ಕೃತಿಕ ಸಮುದಾಯಗಳ ವಿರುದ್ಧ ನಡೆಯುವ ಭಯೋತ್ಪಾದನೆಯನ್ನು ತಡೆಯಬೇಕು ಎಂದು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಅಫ್ಗಾನಿಸ್ತಾನದ ನೆಲವನ್ನು ಬೇರೆ ದೇಶದ ಮೇಲೆ ಭಯೋತ್ಪಾದನೆ ನಡೆಸಲು ಬಳಸಿಕೊಳ್ಳಬಾರದು ಎಂದು ಬ್ರಿಕ್ಸ್ ಸಂಘಟನೆ ಒತ್ತಾಯಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಬ್ರಿಕ್ಸ್ ಶೃಂಗಸಭೆಯಲ್ಲಿ ಐದೂ ಸದಸ್ಯ ರಾಷ್ಟ್ರಗಳು ಅಫ್ಗನ್ನಲ್ಲಿನ ಸ್ಥಿತಿ ಬಗ್ಗೆ ಕಳವಳ ವ್ಯಕ್ತಪಡಿಸಿದೆ.</p>.<p>ಭಾರತವು ಆಯೋಜಿಸಿದ್ದ ಸಭೆಯಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಚೀನಾ ಅಧ್ಯಕ್ಷ ಷಿ-ಜಿನ್ಪಿಂಗ್, ದಕ್ಷಿಣ ಆಫ್ರಿಕಾ ಅಧ್ಯಕ್ಷ ಸಿರಿಲ್ ರಾಮಾಫೋಸಾ ಮತ್ತು ಬ್ರೆಜಿಲ್ ಅಧ್ಯಕ್ಷ ಜೈರ್ ಬೊಲ್ಸಾನ್ಯಾರೋ ಭಾಗಿಯಾಗಿದ್ದರು.</p>.<p>ಅಫ್ಗಾನಿಸ್ತಾನದಲ್ಲಿನ ಹಿಂಸಾಚಾರವನ್ನು ಕೊನೆಗೊಳಿಸಿ, ಶಾಂತಿ ಸ್ಥಾಪಿಸಬೇಕಿದೆ. ಅಫ್ಗಾನಿಸ್ತಾನದಲ್ಲಿ ಸುಸ್ಥಿರತೆ, ಶಾಂತಿ, ಕಾನೂನು ಮತ್ತು ಸುವ್ಯವಸ್ಥೆಯನ್ನು ಸ್ಥಾಪಿಸಲು ಅಫ್ಗನ್ ಅನ್ನೂ ಒಳಗೊಂಡು ಮಾತುಕತೆ ನಡೆಸಬೇಕು ಎಂದು ಶೃಂಗಸಭೆಯ ಅಂತ್ಯದಲ್ಲಿ ಘೋಷಣೆ ಹೊರಡಿಸಲಾಗಿದೆ.</p>.<p>‘ಭಯೋತ್ಪಾದನೆಯನ್ನು ತಡೆಗಟ್ಟುವುದು ಆದ್ಯತೆಯಾಗಬೇಕು. ಬೇರೆ ದೇಶಗಳ ಮೇಲೆ ಭಯೋತ್ಪಾದನೆ ನಡೆಸಲು ಅಫ್ಗನ್ ನೆಲವನ್ನು ಬಳಸಿಕೊಳ್ಳುವುದನ್ನು ತಡೆಯಬೇಕಿದೆ. ಅಫ್ಗಾನಿಸ್ತಾನದ ಮೂಲಕ ನಡೆಯುವ ಮಾದಕ ವಸ್ತುಗಳ ಕಳ್ಳಸಾಗಣೆಯನ್ನೂ ತಡೆಗಟ್ಟಬೇಕು’ ಎಂದು ಘೋಷಣೆಯಲ್ಲಿ ವಿವರಿಸಲಾಗಿದೆ.</p>.<p>ಭಯೋತ್ಪಾದನೆ ತಡೆಗಟ್ಟಲು ಬ್ರಿಕ್ಸ್ ಕಾರ್ಯ ಯೋಜನೆಗೆ ಸದಸ್ಯ ರಾಷ್ಟ್ರಗಳು ಅನುಮೋದನೆ ನೀಡಿವೆ. ಅದನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಬದ್ಧವಾಗಿರುವುದಾಗಿ ಘೋಷಿಸಿವೆ. ಯಾವುದೇ ಧರ್ಮ, ರಾಷ್ಟ್ರ, ನಾಗರಿಕತೆ ಮತ್ತು ಸಾಂಸ್ಕೃತಿಕ ಸಮುದಾಯಗಳ ವಿರುದ್ಧ ನಡೆಯುವ ಭಯೋತ್ಪಾದನೆಯನ್ನು ತಡೆಯಬೇಕು ಎಂದು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>