ತಿರುವನಂತಪುರಂ: ಕಲ್ಲಿಕೋಟೆಯಿಂದ ದಮಾಮ್ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದಿದ್ದರಿಂದ ತಿರುವನಂತಪುರ ಏರ್ಪೋರ್ಟ್ನಲ್ಲಿ ತುರ್ತು ಲ್ಯಾಂಡ್ ಆಗಿದೆ. ಹೀಗಾಗಿ ವಿಮಾನ ನಿಲ್ದಾಣದಾದ್ಯಂತ ತುರ್ತು ಸ್ಥಿತಿ ಘೋಷಣೆ ಮಾಡಲಾಗಿದೆ. ಹೈಡ್ರಾಲಿಕ್ ವೈಫಲ್ಯ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.