<p><strong>ವಾಷಿಂಗ್ಟನ್:</strong> ಮ್ಯಾನ್ಮಾರ್ನಲ್ಲಿನ ಕ್ಷಿಪ್ರ ಬೆಳವಣಿಗೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಅಮೆರಿಕ, ಸ್ಟೇಟ್ ಕೌನ್ಸಿಲರ್ ಆಂಗ್ ಸಾನ್ ಸೂ ಕಿ ಸೇರಿದಂತೆ ಬಂಧಿಸಿರುವ ಮುಖಂಡರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿದೆ.</p>.<p>ಮ್ಯಾನ್ಮಾರ್ನಲ್ಲಿ ಬೆಳವಣಿಗೆಗಳನ್ನು ಅವಲೋಕಿಸಲಾಗುತ್ತಿದೆ. ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮರುಸ್ಥಾಪಿಸಲು ಕ್ರಮ ಕೈಗೊಳ್ಳದಿದ್ದಲ್ಲಿ ಯಾವುದೇ ಕ್ರಮ ಕೈಗೊಳ್ಳಲು ಅಮೆರಿಕ ಸಿದ್ಧ ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಜೆ ಸಾಕಿ ಹೇಳಿದ್ದಾರೆ.</p>.<p>ಮ್ಯಾನ್ಮಾರ್ ಸೇನೆಯು ದೇಶದ ಆಡಳಿತವನ್ನು ಒಂದು ವರ್ಷದ ಅವಧಿಗೆ ತನ್ನ ವಶಕ್ಕೆ ಪಡೆದಿದೆ. ಆಂಗ್ ಸಾನ್ ಸೂಕಿ ಸೇರಿದಂತೆ ಆಡಳಿತಾರೂಢ ಪಕ್ಷದ ಹಲವು ನಾಯಕರನ್ನು ಸೇನೆ ಬಂಧಿಸಿದೆ ಎಂದು ಸೇನೆ ಒಡೆತನ ಮ್ಯಾವಾಡಿ ಟಿವಿ ವರದಿ ಮಾಡಿದೆ.</p>.<p class="Briefhead"><strong>ದಂಗೆ ವಿರೋಧಿಸಿ: ಸೂ ಕಿ</strong></p>.<p><strong>ನೇಪಿಟಾ, ಮ್ಯಾನ್ಮಾರ್ (ಎಪಿ) :</strong> ‘ದೇಶದಲ್ಲಿ ಸೇನೆಯ ದಂಗೆಯನ್ನು ವಿರೋಧಿಸಿ’ ಎಂದು ಅಂಗ್ ಸಾನ್ ಸೂ ಕಿ ನೇತೃತ್ವದ ನ್ಯಾಷನಲ್ ಲೀಗ್ ಫಾರ್ ಡೆಮಾಕ್ರಸಿ ಪಕ್ಷ ಜನರಿಗೆ ಮನವಿ ಮಾಡಿದೆ.</p>.<p>ಸೂ ಕಿ ಅವರು ತಮ್ಮ ಫೇಸ್ಬುಕ್ ಖಾತೆ ಮೂಲಕ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ‘ಸೇನೆಯ ಈ ದಂಗೆಯನ್ನು ಸಮರ್ಥಿಸಲಾಗದು. ಸೇನೆಯ ಈ ನಡೆ ಸಂವಿಧಾನದ ಆಶಯ ಹಾಗೂ ಮತದಾರರ ತೀರ್ಪಿಗೆ ವಿರುದ್ಧವಾಗಿದೆ. ಯಾವುದೇ ಕಾರಣಕ್ಕೂ ದೇಶದಲ್ಲಿ ಮತ್ತೆ ಮಿಲಿಟರಿ ಸರ್ವಾಧಿಕಾರಿ ಆಡಳಿತ ಬರದಂತೆ ನೋಡಿಕೊಳ್ಳಬೇಕು’ ಎಂದು ಮನವಿ ಮಾಡಿದ್ದಾರೆ.</p>.<p class="Briefhead"><strong>ಭಾರತ ಕಳವಳ</strong></p>.<p><strong>ನವದೆಹಲಿ: </strong>‘ನೆರೆಯ ದೇಶ ಮ್ಯಾನ್ಮಾರ್ನಲ್ಲಿ ಸೇನೆ ದಂಗೆಯಿಂದ ಉದ್ಭವಿಸಿರುವ ಪರಿಸ್ಥಿತಿಯನ್ನು ಅವಲೋಕಿಸಲಾಗುತ್ತಿದೆ. ರಾಜಕೀಯ ಮುಖಂಡರನ್ನು ಬಂಧಿಸಿರುವುದು ತೀವ್ರ ಕಳವಳಕಾರಿ’ ಎಂದು ಭಾರತ ಪ್ರತಿಕ್ರಿಯಿಸಿದೆ.</p>.<p>‘ದೇಶದಲ್ಲಿ ಪ್ರಜಾಪ್ರಭುತ್ವ ಮೌಲ್ಯಗಳ ಸ್ಥಾಪನೆಯಾಗಬೇಕು ಎಂಬುದನ್ನು ಭಾರತ ಬಯಸುತ್ತದೆ’ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಾಷಿಂಗ್ಟನ್:</strong> ಮ್ಯಾನ್ಮಾರ್ನಲ್ಲಿನ ಕ್ಷಿಪ್ರ ಬೆಳವಣಿಗೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಅಮೆರಿಕ, ಸ್ಟೇಟ್ ಕೌನ್ಸಿಲರ್ ಆಂಗ್ ಸಾನ್ ಸೂ ಕಿ ಸೇರಿದಂತೆ ಬಂಧಿಸಿರುವ ಮುಖಂಡರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿದೆ.</p>.<p>ಮ್ಯಾನ್ಮಾರ್ನಲ್ಲಿ ಬೆಳವಣಿಗೆಗಳನ್ನು ಅವಲೋಕಿಸಲಾಗುತ್ತಿದೆ. ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮರುಸ್ಥಾಪಿಸಲು ಕ್ರಮ ಕೈಗೊಳ್ಳದಿದ್ದಲ್ಲಿ ಯಾವುದೇ ಕ್ರಮ ಕೈಗೊಳ್ಳಲು ಅಮೆರಿಕ ಸಿದ್ಧ ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಜೆ ಸಾಕಿ ಹೇಳಿದ್ದಾರೆ.</p>.<p>ಮ್ಯಾನ್ಮಾರ್ ಸೇನೆಯು ದೇಶದ ಆಡಳಿತವನ್ನು ಒಂದು ವರ್ಷದ ಅವಧಿಗೆ ತನ್ನ ವಶಕ್ಕೆ ಪಡೆದಿದೆ. ಆಂಗ್ ಸಾನ್ ಸೂಕಿ ಸೇರಿದಂತೆ ಆಡಳಿತಾರೂಢ ಪಕ್ಷದ ಹಲವು ನಾಯಕರನ್ನು ಸೇನೆ ಬಂಧಿಸಿದೆ ಎಂದು ಸೇನೆ ಒಡೆತನ ಮ್ಯಾವಾಡಿ ಟಿವಿ ವರದಿ ಮಾಡಿದೆ.</p>.<p class="Briefhead"><strong>ದಂಗೆ ವಿರೋಧಿಸಿ: ಸೂ ಕಿ</strong></p>.<p><strong>ನೇಪಿಟಾ, ಮ್ಯಾನ್ಮಾರ್ (ಎಪಿ) :</strong> ‘ದೇಶದಲ್ಲಿ ಸೇನೆಯ ದಂಗೆಯನ್ನು ವಿರೋಧಿಸಿ’ ಎಂದು ಅಂಗ್ ಸಾನ್ ಸೂ ಕಿ ನೇತೃತ್ವದ ನ್ಯಾಷನಲ್ ಲೀಗ್ ಫಾರ್ ಡೆಮಾಕ್ರಸಿ ಪಕ್ಷ ಜನರಿಗೆ ಮನವಿ ಮಾಡಿದೆ.</p>.<p>ಸೂ ಕಿ ಅವರು ತಮ್ಮ ಫೇಸ್ಬುಕ್ ಖಾತೆ ಮೂಲಕ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ‘ಸೇನೆಯ ಈ ದಂಗೆಯನ್ನು ಸಮರ್ಥಿಸಲಾಗದು. ಸೇನೆಯ ಈ ನಡೆ ಸಂವಿಧಾನದ ಆಶಯ ಹಾಗೂ ಮತದಾರರ ತೀರ್ಪಿಗೆ ವಿರುದ್ಧವಾಗಿದೆ. ಯಾವುದೇ ಕಾರಣಕ್ಕೂ ದೇಶದಲ್ಲಿ ಮತ್ತೆ ಮಿಲಿಟರಿ ಸರ್ವಾಧಿಕಾರಿ ಆಡಳಿತ ಬರದಂತೆ ನೋಡಿಕೊಳ್ಳಬೇಕು’ ಎಂದು ಮನವಿ ಮಾಡಿದ್ದಾರೆ.</p>.<p class="Briefhead"><strong>ಭಾರತ ಕಳವಳ</strong></p>.<p><strong>ನವದೆಹಲಿ: </strong>‘ನೆರೆಯ ದೇಶ ಮ್ಯಾನ್ಮಾರ್ನಲ್ಲಿ ಸೇನೆ ದಂಗೆಯಿಂದ ಉದ್ಭವಿಸಿರುವ ಪರಿಸ್ಥಿತಿಯನ್ನು ಅವಲೋಕಿಸಲಾಗುತ್ತಿದೆ. ರಾಜಕೀಯ ಮುಖಂಡರನ್ನು ಬಂಧಿಸಿರುವುದು ತೀವ್ರ ಕಳವಳಕಾರಿ’ ಎಂದು ಭಾರತ ಪ್ರತಿಕ್ರಿಯಿಸಿದೆ.</p>.<p>‘ದೇಶದಲ್ಲಿ ಪ್ರಜಾಪ್ರಭುತ್ವ ಮೌಲ್ಯಗಳ ಸ್ಥಾಪನೆಯಾಗಬೇಕು ಎಂಬುದನ್ನು ಭಾರತ ಬಯಸುತ್ತದೆ’ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>