<p><strong>ಕೊಲಂಬೊ:</strong> ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಶ್ರೀಲಂಕಾದಲ್ಲಿ ಜನರ ಆಕ್ರೋಶಕ್ಕೆ ಕೊನೆಗೂ ಮಣಿದಿರುವ ಅಧ್ಯಕ್ಷ ಗೊಟಬಯ ರಾಜಪಕ್ಸ, ಜುಲೈ 13ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.</p>.<p>ಈ ಕುರಿತು ಮಾಹಿತಿ ನೀಡಿರುವ ಸ್ಪೀಕರ್ ಮಹಿಂದಾ ಯಪಾ ಅಬೆವರ್ಧನ, 'ಇದೇ 13ರಂದು ಗೊಟಬಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ' ಎಂದು ಹೇಳಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/world-news/protesters-set-sri-lanka-pm-ranil-wickremesinghes-house-on-fire-952935.html" itemprop="url">ಶ್ರೀಲಂಕಾ: ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ಬೆನ್ನಲ್ಲೇ ರಾನಿಲ್ ನಿವಾಸಕ್ಕೆ ಬೆಂಕಿ </a></p>.<p>ಗೊಟಬಯ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನಕಾರರು ಶನಿವಾರ ಅಧ್ಯಕ್ಷರ ಗೃಹಕಚೇರಿಗೆ ನುಗ್ಗಿದ್ದರು. ಇದಕ್ಕೂ ಮುನ್ನವೇ ಅಧ್ಯಕ್ಷರು ಪಲಾಯನ ಮಾಡಿದ್ದರು.</p>.<p>ಅಧ್ಯಕ್ಷರ ರಾಜೀನಾಮೆ ಘೋಷಣೆಯಾಗುತ್ತಿದ್ದಂತೆಯೇ ಜನರು ಪಟಾಕಿ ಸಿಡಿಸಿ ಸಂಭ್ರಮವನ್ನು ಆಚರಿಸಿಕೊಂಡರು.</p>.<p>ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಸಹ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ನಡುವೆ ಉದ್ರಿಕ್ತ ಜನರ ಗುಂಪುಪ್ರಧಾನಿ ನಿವಾಸದ ಮೇಲೆ ದಾಳಿ ನಡೆಸಿ, ಬೆಂಕಿ ಹಚ್ಚಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಲಂಬೊ:</strong> ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಶ್ರೀಲಂಕಾದಲ್ಲಿ ಜನರ ಆಕ್ರೋಶಕ್ಕೆ ಕೊನೆಗೂ ಮಣಿದಿರುವ ಅಧ್ಯಕ್ಷ ಗೊಟಬಯ ರಾಜಪಕ್ಸ, ಜುಲೈ 13ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.</p>.<p>ಈ ಕುರಿತು ಮಾಹಿತಿ ನೀಡಿರುವ ಸ್ಪೀಕರ್ ಮಹಿಂದಾ ಯಪಾ ಅಬೆವರ್ಧನ, 'ಇದೇ 13ರಂದು ಗೊಟಬಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ' ಎಂದು ಹೇಳಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/world-news/protesters-set-sri-lanka-pm-ranil-wickremesinghes-house-on-fire-952935.html" itemprop="url">ಶ್ರೀಲಂಕಾ: ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ಬೆನ್ನಲ್ಲೇ ರಾನಿಲ್ ನಿವಾಸಕ್ಕೆ ಬೆಂಕಿ </a></p>.<p>ಗೊಟಬಯ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನಕಾರರು ಶನಿವಾರ ಅಧ್ಯಕ್ಷರ ಗೃಹಕಚೇರಿಗೆ ನುಗ್ಗಿದ್ದರು. ಇದಕ್ಕೂ ಮುನ್ನವೇ ಅಧ್ಯಕ್ಷರು ಪಲಾಯನ ಮಾಡಿದ್ದರು.</p>.<p>ಅಧ್ಯಕ್ಷರ ರಾಜೀನಾಮೆ ಘೋಷಣೆಯಾಗುತ್ತಿದ್ದಂತೆಯೇ ಜನರು ಪಟಾಕಿ ಸಿಡಿಸಿ ಸಂಭ್ರಮವನ್ನು ಆಚರಿಸಿಕೊಂಡರು.</p>.<p>ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಸಹ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ನಡುವೆ ಉದ್ರಿಕ್ತ ಜನರ ಗುಂಪುಪ್ರಧಾನಿ ನಿವಾಸದ ಮೇಲೆ ದಾಳಿ ನಡೆಸಿ, ಬೆಂಕಿ ಹಚ್ಚಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>