<p><strong>ವಿಶ್ವಸಂಸ್ಥೆ:</strong> ‘ಯಾವುದೇ ದೇಶಗಳ ಸೇನೆಗಳು ಪರಸ್ಪರ ಸಂಘರ್ಷಕ್ಕಿಳಿಯುವುದು ವಿಪತ್ತಿಗೆ ಕಾರಣವಾಗುತ್ತದೆ. ಈ ಹಿನ್ನೆಲೆಯಲ್ಲಿ ಭಾರತ ಮತ್ತು ಪಾಕಿಸ್ತಾನಗಳು ತಮ್ಮ ನಡುವಿನ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಗಂಭೀರವಾಗಿ ಚರ್ಚಿಸುವುದು ಅವಶ್ಯಕವಾಗಿದೆ’ ಎಂದು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗುಟೆರಸ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಕಾಶ್ಮೀರದಲ್ಲಿ ಈಗಿರುವ ಪರಿಸ್ಥಿತಿಯನ್ನು ಉಲ್ಲೇಖಿಸಿ ಭಾರತ ಮತ್ತು ಪಾಕಿಸ್ತಾನ ನಡುವೆ ಉಂಟಾಗಿರುವ ಉದ್ವಿಗ್ನ ಸ್ಥಿತಿ ಕುರಿತು ಪಾಕಿಸ್ತಾನದ ಪತ್ರಕರ್ತರು ಕೇಳಿದ ಪ್ರಶ್ನೆಗೆ ಗುಟೆರಸ್ ಈ ರೀತಿ ಪ್ರತಿಕ್ರಿಯಿಸಿದರು.</p>.<p>‘ನೀವು ಪ್ರಸ್ತಾಪಿಸಿದ ಎಲ್ಲಾ ಪ್ರಾಂತ್ಯಗಳಲ್ಲಿ ಮಾನವ ಹಕ್ಕುಗಳನ್ನು ಸಂಪೂರ್ಣವಾಗಿ ಗೌರವಿಸುವುದು ಅತ್ಯಗತ್ಯ’ ಎಂದು ಹೇಳಿದರು.</p>.<p>‘ಸೇನೆ ಬಳಸದೇ ಸಮಸ್ಯೆಗಳಿಗೆ ಶಾಂತಿಯುತ ಪರಿಹಾರ ಕಂಡುಕೊಳ್ಳಬೇಕೆಂಬುದು ನಮ್ಮ ಒತ್ತಾಯವಾಗಿದೆ. ಪಾಕಿಸ್ತಾನ ಮತ್ತು ಭಾರತದ ನಡುವಿನ ವಿಚಾರವನ್ನು ಗಮನಿಸಿದರೆ, ಸೇನೆಗಳ ಬಳಕೆಯಿಂದ ಅಪಾಯ ಸಂಭವಿಸುವುದು ಸ್ಪಷ್ಟವಾಗಿದೆ. ಇದರಿಂದ ಆ ಎರಡು ದೇಶಕ್ಕಲ್ಲದೇ, ವಿಶ್ವಕ್ಕೇ ತೊಂದರೆಯಾಗಲಿದೆ‘ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಶ್ವಸಂಸ್ಥೆ:</strong> ‘ಯಾವುದೇ ದೇಶಗಳ ಸೇನೆಗಳು ಪರಸ್ಪರ ಸಂಘರ್ಷಕ್ಕಿಳಿಯುವುದು ವಿಪತ್ತಿಗೆ ಕಾರಣವಾಗುತ್ತದೆ. ಈ ಹಿನ್ನೆಲೆಯಲ್ಲಿ ಭಾರತ ಮತ್ತು ಪಾಕಿಸ್ತಾನಗಳು ತಮ್ಮ ನಡುವಿನ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಗಂಭೀರವಾಗಿ ಚರ್ಚಿಸುವುದು ಅವಶ್ಯಕವಾಗಿದೆ’ ಎಂದು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗುಟೆರಸ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಕಾಶ್ಮೀರದಲ್ಲಿ ಈಗಿರುವ ಪರಿಸ್ಥಿತಿಯನ್ನು ಉಲ್ಲೇಖಿಸಿ ಭಾರತ ಮತ್ತು ಪಾಕಿಸ್ತಾನ ನಡುವೆ ಉಂಟಾಗಿರುವ ಉದ್ವಿಗ್ನ ಸ್ಥಿತಿ ಕುರಿತು ಪಾಕಿಸ್ತಾನದ ಪತ್ರಕರ್ತರು ಕೇಳಿದ ಪ್ರಶ್ನೆಗೆ ಗುಟೆರಸ್ ಈ ರೀತಿ ಪ್ರತಿಕ್ರಿಯಿಸಿದರು.</p>.<p>‘ನೀವು ಪ್ರಸ್ತಾಪಿಸಿದ ಎಲ್ಲಾ ಪ್ರಾಂತ್ಯಗಳಲ್ಲಿ ಮಾನವ ಹಕ್ಕುಗಳನ್ನು ಸಂಪೂರ್ಣವಾಗಿ ಗೌರವಿಸುವುದು ಅತ್ಯಗತ್ಯ’ ಎಂದು ಹೇಳಿದರು.</p>.<p>‘ಸೇನೆ ಬಳಸದೇ ಸಮಸ್ಯೆಗಳಿಗೆ ಶಾಂತಿಯುತ ಪರಿಹಾರ ಕಂಡುಕೊಳ್ಳಬೇಕೆಂಬುದು ನಮ್ಮ ಒತ್ತಾಯವಾಗಿದೆ. ಪಾಕಿಸ್ತಾನ ಮತ್ತು ಭಾರತದ ನಡುವಿನ ವಿಚಾರವನ್ನು ಗಮನಿಸಿದರೆ, ಸೇನೆಗಳ ಬಳಕೆಯಿಂದ ಅಪಾಯ ಸಂಭವಿಸುವುದು ಸ್ಪಷ್ಟವಾಗಿದೆ. ಇದರಿಂದ ಆ ಎರಡು ದೇಶಕ್ಕಲ್ಲದೇ, ವಿಶ್ವಕ್ಕೇ ತೊಂದರೆಯಾಗಲಿದೆ‘ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>