ಢಾಕಾ: ಬಾಂಗ್ಲಾದೇಶದ 10 ದಿನಗಳ ಸುವರ್ಣ ಸ್ವಾತಂತ್ರ್ಯ ಮಹೋತ್ಸವ ಮತ್ತು ರಾಷ್ಟ್ರಪಿತ ಬಂಗಬಂಧು ಶೇಖ್ ಮುಜಿಬುರ್ ರಹಮಾನ್ ಅವರ ಜನ್ಮಶತಮಾನೋತ್ಸವ ಕಾರ್ಯಕ್ರಮವು ಬುಧವಾರ ಆರಂಭಗೊಂಡಿದೆ.
ಸುವರ್ಣ ಸ್ವಾತಂತ್ರ್ಯ ಮಹೋತ್ಸವವು 27 ರ ತನಕ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ನೇಪಾಳ, ಶ್ರೀಲಂಕಾ, ಭೂತಾನ್ ಹಾಗೂ ಮಾಲ್ಡೀವ್ಸ್ನ ಉನ್ನತ ನಾಯಕರು ಭಾಗವಹಿಸಲಿದ್ದಾರೆ. ಇತರೆ ವಿಶ್ವ ನಾಯಕರನ್ನು ಈ ಮಹೋತ್ಸವಕ್ಕೆ ಆಹ್ವಾನಿಸಲಾಗಿದೆ.
ಮಾಲ್ಡೀವ್ಸ್ ಅಧ್ಯಕ್ಷ ಇಬ್ರಾಹಿಂ ಮೊಹಮ್ಮದ ಸೊಲಿಹ್ ಅವರುಬುಧವಾರ ಢಾಕಾಗೆ ಬಂದಿಳಿದಿದ್ದು, ಅವರನ್ನು ಬಾಂಗ್ಲಾದೇಶದ ಅಧ್ಯಕ್ಷ ಅಬ್ದುಲ್ ಹಮೀದ್ ಅವರು ಸ್ವಾಗತಿಸಿದರು. ಬಳಿಕ ಉಭಯ ನಾಯಕರು ರಾಷ್ಟ್ರೀಯ ಸ್ಮಾರಕಕ್ಕೆ ಭೇಟಿ ನೀಡಿ,1971ರ ಹುತಾತ್ಮರಿಗೆ ಗೌರವ ಸಲ್ಲಿಸಿದರು.
1971ರ ವಿಮೋಚನಾ ಯುದ್ಧದ ಬಳಿಕಬಾಂಗ್ಲಾದೇಶವು ಪಾಕಿಸ್ತಾನದಿಂದ ಸ್ವಾತಂತ್ರ್ಯವನ್ನು ಪಡೆಯಿತು.