ಯಾಂಗೂನ್: ‘ಮ್ಯಾನ್ಮಾರ್ನಲ್ಲಿ ಬಂಧಿಸಿದ್ದ ಬಿಬಿಸಿ ಪತ್ರಕರ್ತನನ್ನು ಸೋಮವಾರ ಬಿಡುಗಡೆಗೊಳಿಸಲಾಗಿದೆ’ ಎಂದು ಸುದ್ದಿ ಸಂಸ್ಥೆಯೊಂದು ಹೇಳಿದೆ.
ನೈಪಿತಾವ್ನ ನ್ಯಾಯಾಲಯದ ಮುಂದೆ ಪ್ರತಿಭಟನೆ ಕುರಿತಂತೆ ವರದಿ ಮಾಡುತ್ತಿದ್ದ ಬಿಬಿಸಿ ಪತ್ರಕರ್ತ ಆಂಗ್ ಥುರಾ ಅವರನ್ನು ಬಿಳಿ ಬಣ್ಣದ ವಸ್ತ್ರ ಧರಿಸಿದ್ದ ವ್ಯಕ್ತಿಗಳು ಶುಕ್ರವಾರ ಬಂಧಿಸಿದ್ದರು.
‘ಸದ್ಯ ಆಂಗ್ ಥುರಾ ಅವರನ್ನು ಬಿಡುಗಡೆಗೊಳಿಸಲಾಗಿದೆ. ಆದರೆ, ಈ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಿಲ್ಲ’ ಎಂದು ಸುದ್ದಿ ಸಂಸ್ಥೆ ತಿಳಿಸಿದೆ.
ಮ್ಯಾನ್ಮಾರ್ನಲ್ಲಿ ಮಿಲಿಟರಿ ಆಡಳಿತದ ವಿರುದ್ಧ ಪ್ರತಿಭಟನೆ ಮುಂದುವರಿದಿದ್ದು, ಸೋಮವಾರ ಶಿಕ್ಷಕರು ಸೇರಿದಂತೆ ಹಲವಾರು ಮಂದಿ ಮಾಂಡೆಲಾ ನಗರದಲ್ಲಿ ಜಮಾಯಿಸಿದ್ದರು. ಈ ವೇಳೆ ಪ್ರತಿಭಟನಕಾರರು,‘ಮಿಲಿಟರಿ ಹಿಂಸಾಚಾರವನ್ನು ತಡೆಯಲು ವಿಶ್ವಸಂಸ್ಥೆ ಮಧ್ಯಪ್ರವೇಶಿಸಬೇಕು’ ಎಂದು ಘೋಷಣೆಗಳನ್ನು ಕೂಗಿದರು.