<p><strong>ಬೈರೂತ್:</strong> ಯಾವುದೇ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳದೇ ಇಲ್ಲಿನ ಬಂದರುದಲ್ಲಿರುವ ಗೋದಾಮಿನಲ್ಲಿ ಸ್ಪೋಟಕ ರಾಸಾಯನಿಕಗಳನ್ನು ದಾಸ್ತಾನು ಮಾಡಲಾಗಿದೆ ಎಂದು ಲೆಬನಾನ್ನ ಪ್ರಮುಖ ಇಲಾಖೆಗಳು, ಸಂಸ್ಥೆಗಳು ಕಳೆದ ಆರು ವರ್ಷಗಳಲ್ಲಿ ಕನಿಷ್ಠ ಹತ್ತು ಬಾರಿ ಎಚ್ಚರಿಕೆ ನೀಡಿದ್ದವು ಎಂಬ ವಿಷಯ ದಾಖಲೆಗಳಿಂದ ಬೆಳಕಿಗೆ ಬಂದಿದೆ.</p>.<p>ಲೆಬನಾನ್ ಕಸ್ಟಮ್ಸ್ ಅಧಿಕಾರಿಗಳು, ಸೇನಾ ವಿಭಾಗದವರು, ರಕ್ಷಣಾ ಸಂಸ್ಥೆಗಳು ಮತ್ತು ನ್ಯಾಯಾಂಗ ವಿಭಾಗದವರು ಈ ಬಗ್ಗೆ ಪದೇ ಪದೇ ಎಚ್ಚರಿಕೆ ನೀಡಿರುವುದಾಗಿ ಲಭ್ಯವಾಗಿರುವ ದಾಖಲೆಗಳಿಂದ ಬಹಿರಂಗಗೊಂಡಿದೆ.</p>.<p>ಇಷ್ಟೆಲ್ಲ ಎಚ್ಚರಿಕೆಗಳ ನಡುವೆಯೂ ಬಂದರಿನ ಸಿಬ್ಬಂದಿ ನಿರ್ಲಕ್ಷ್ಯ ತೋರಿದ ಪರಿಣಾಮವಾಗಿ ದಾಸ್ತಾನಾಗಿದ್ದ 2750 ಟನ್ ಅಮೋನಿಯಂ ನೈಟ್ರೇಟ್ ಸ್ಫೋಟಗೊಂಡು, ನೂರಾರು ಮಂದಿ ಸಾವಿಗೀಡಾಗಲು ಕಾರಣವಾಯಿತು.</p>.<p><strong>ಇದನ್ನೂ ಓದಿ:</strong><a href="https://www.prajavani.net/world-news/beirut-explosion-lebanon-pm-hassan-diab-appeals-for-international-assistance-750956.html" target="_blank">ಬೈರೂತ್ ಸ್ಫೋಟ: 135ಕ್ಕೂ ಅಧಿಕ ಸಾವು</a></p>.<p>ಹಿಂದಿನ ಅಧ್ಯಕ್ಷರು ಹಾಗೂ ಹಲವು ಅಧಿಕಾರಿಗಳು ಈ ರಾಸಾಯನಿಕ ಸ್ಫೋಟಕದ ಅಪಾಯದ ಬಗ್ಗೆ ಎಚ್ಚರಿಸಿದ್ದರು. ಕ್ರಮ ಕೈಗೊಳ್ಳವಂತೆಯೂ ಸಲಹೆ ನೀಡಿದ್ದರು. ಆದರೆ, ಬಂದರು ಅಧಿಕಾರಿಗಳು ಇಂಥ ಯಾವುದೇ ಸಲಹೆಯನ್ನು ಗಂಭೀರವಾಗಿ ಪರಿಗಣಿಸದೇ ನಿರ್ಲಕ್ಷ್ಯವಹಿಸಿದ್ದರು. ಇದೇ ಸ್ಫೋಟ ಸಂಭವಿಸಲು ಕಾರಣ ಎಂದು ತಿಳಿದುಬಂದಿದೆ.</p>.<p>ಬೈರೂತ್ ಸ್ಫೋಟ ಕುರಿತು ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿರುವ ದಾಖಲೆಗಳ ಪ್ರಕಾರ ಲೆಬನಾನ್ನ ದೀರ್ಘಕಾಲ ಆಡಳಿತ ನಡೆಸಿದ ಸರ್ಕಾರಗಳ ಭ್ರಷ್ಟಾಚಾರ, ಅಸಮರ್ಥ ಕಾರ್ಯವೈಖರಿಯನ್ನು ಒತ್ತಿ ಹೇಳುತ್ತಿವೆ. ಭದ್ರತೆ ಮತ್ತು ಸೌಲಭ್ಯಗಳನ್ನು ಕಲ್ಪಿಸುವಲ್ಲಿ ಈ ಸರ್ಕಾರಗಳು ವಿಫಲವಾಗಿವೆ ಎಂಬುದನ್ನು ಸಾಕ್ಷ್ಯೀಕರಿಸುತ್ತಿವೆ.</p>.<p>ಸ್ಫೋಟದ ತನಿಖೆ ನಡೆಸುತ್ತಿರುವ ಅಧಿಕಾರಿಗಳು ಬೈರೂತ್ ಬಂದರ್ನ ಸಿಬ್ಬಂದಿಗಳನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಈವರೆಗೆ 16 ಮಂದಿ ಸಿಬ್ಬಂದಿಯನ್ನು ವಶಕ್ಕೆ ಪಡೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೈರೂತ್:</strong> ಯಾವುದೇ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳದೇ ಇಲ್ಲಿನ ಬಂದರುದಲ್ಲಿರುವ ಗೋದಾಮಿನಲ್ಲಿ ಸ್ಪೋಟಕ ರಾಸಾಯನಿಕಗಳನ್ನು ದಾಸ್ತಾನು ಮಾಡಲಾಗಿದೆ ಎಂದು ಲೆಬನಾನ್ನ ಪ್ರಮುಖ ಇಲಾಖೆಗಳು, ಸಂಸ್ಥೆಗಳು ಕಳೆದ ಆರು ವರ್ಷಗಳಲ್ಲಿ ಕನಿಷ್ಠ ಹತ್ತು ಬಾರಿ ಎಚ್ಚರಿಕೆ ನೀಡಿದ್ದವು ಎಂಬ ವಿಷಯ ದಾಖಲೆಗಳಿಂದ ಬೆಳಕಿಗೆ ಬಂದಿದೆ.</p>.<p>ಲೆಬನಾನ್ ಕಸ್ಟಮ್ಸ್ ಅಧಿಕಾರಿಗಳು, ಸೇನಾ ವಿಭಾಗದವರು, ರಕ್ಷಣಾ ಸಂಸ್ಥೆಗಳು ಮತ್ತು ನ್ಯಾಯಾಂಗ ವಿಭಾಗದವರು ಈ ಬಗ್ಗೆ ಪದೇ ಪದೇ ಎಚ್ಚರಿಕೆ ನೀಡಿರುವುದಾಗಿ ಲಭ್ಯವಾಗಿರುವ ದಾಖಲೆಗಳಿಂದ ಬಹಿರಂಗಗೊಂಡಿದೆ.</p>.<p>ಇಷ್ಟೆಲ್ಲ ಎಚ್ಚರಿಕೆಗಳ ನಡುವೆಯೂ ಬಂದರಿನ ಸಿಬ್ಬಂದಿ ನಿರ್ಲಕ್ಷ್ಯ ತೋರಿದ ಪರಿಣಾಮವಾಗಿ ದಾಸ್ತಾನಾಗಿದ್ದ 2750 ಟನ್ ಅಮೋನಿಯಂ ನೈಟ್ರೇಟ್ ಸ್ಫೋಟಗೊಂಡು, ನೂರಾರು ಮಂದಿ ಸಾವಿಗೀಡಾಗಲು ಕಾರಣವಾಯಿತು.</p>.<p><strong>ಇದನ್ನೂ ಓದಿ:</strong><a href="https://www.prajavani.net/world-news/beirut-explosion-lebanon-pm-hassan-diab-appeals-for-international-assistance-750956.html" target="_blank">ಬೈರೂತ್ ಸ್ಫೋಟ: 135ಕ್ಕೂ ಅಧಿಕ ಸಾವು</a></p>.<p>ಹಿಂದಿನ ಅಧ್ಯಕ್ಷರು ಹಾಗೂ ಹಲವು ಅಧಿಕಾರಿಗಳು ಈ ರಾಸಾಯನಿಕ ಸ್ಫೋಟಕದ ಅಪಾಯದ ಬಗ್ಗೆ ಎಚ್ಚರಿಸಿದ್ದರು. ಕ್ರಮ ಕೈಗೊಳ್ಳವಂತೆಯೂ ಸಲಹೆ ನೀಡಿದ್ದರು. ಆದರೆ, ಬಂದರು ಅಧಿಕಾರಿಗಳು ಇಂಥ ಯಾವುದೇ ಸಲಹೆಯನ್ನು ಗಂಭೀರವಾಗಿ ಪರಿಗಣಿಸದೇ ನಿರ್ಲಕ್ಷ್ಯವಹಿಸಿದ್ದರು. ಇದೇ ಸ್ಫೋಟ ಸಂಭವಿಸಲು ಕಾರಣ ಎಂದು ತಿಳಿದುಬಂದಿದೆ.</p>.<p>ಬೈರೂತ್ ಸ್ಫೋಟ ಕುರಿತು ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿರುವ ದಾಖಲೆಗಳ ಪ್ರಕಾರ ಲೆಬನಾನ್ನ ದೀರ್ಘಕಾಲ ಆಡಳಿತ ನಡೆಸಿದ ಸರ್ಕಾರಗಳ ಭ್ರಷ್ಟಾಚಾರ, ಅಸಮರ್ಥ ಕಾರ್ಯವೈಖರಿಯನ್ನು ಒತ್ತಿ ಹೇಳುತ್ತಿವೆ. ಭದ್ರತೆ ಮತ್ತು ಸೌಲಭ್ಯಗಳನ್ನು ಕಲ್ಪಿಸುವಲ್ಲಿ ಈ ಸರ್ಕಾರಗಳು ವಿಫಲವಾಗಿವೆ ಎಂಬುದನ್ನು ಸಾಕ್ಷ್ಯೀಕರಿಸುತ್ತಿವೆ.</p>.<p>ಸ್ಫೋಟದ ತನಿಖೆ ನಡೆಸುತ್ತಿರುವ ಅಧಿಕಾರಿಗಳು ಬೈರೂತ್ ಬಂದರ್ನ ಸಿಬ್ಬಂದಿಗಳನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಈವರೆಗೆ 16 ಮಂದಿ ಸಿಬ್ಬಂದಿಯನ್ನು ವಶಕ್ಕೆ ಪಡೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>