<p><strong>ವಾಷಿಂಗ್ಟನ್: </strong>ಕೋವಿಡ್–19 ಪ್ರಕರಣಗಳು ಹೆಚ್ಚಿ, ಸಂಕಷ್ಟದಲ್ಲಿರುವ ಭಾರತಕ್ಕೆ ತನ್ನಲ್ಲಿನ ಹೆಚ್ಚುವರಿ ಲಸಿಕೆಯನ್ನು ಒದಗಿಸದಿರುವ ಅಧ್ಯಕ್ಷ ಜೋ ಬೈಡನ್ ಆಡಳಿತದ ನಿಲುವಿಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ.</p>.<p>ಆಡಳಿತಾರೂಢ ಡೆಮಾಕ್ರಟಿಕ್ ಪಕ್ಷದ ಮುಖಂಡರೂ ಸೇರಿದಂತೆ ವಿವಿಧ ಕ್ಷೇತ್ರಗಳ ನಾಯಕರು ಬೈಡನ್ ಆಡಳಿತದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>‘ಕೋವಿಡ್–19 ವಿರುದ್ಧ ಹೋರಾಡುತ್ತಿರುವ ಭಾರತ ಸೇರಿದಂತೆ ಇತರ ರಾಷ್ಟ್ರಗಳಿಗೆ ಅಸ್ಟ್ರಾಜೆನೆಕಾ ಕಂಪನಿಯ ಲಸಿಕೆಯನ್ನು ನೀಡಬೇಕು’ ಎಂದು ಭಾರತೀಯ ಅಮೆರಿಕನ್ ಸಂಸದ ರಾಜಾ ಕೃಷ್ಣಮೂರ್ತಿ ಒತ್ತಾಯಿಸಿದ್ದಾರೆ.</p>.<p>’ಭಾರತ ಹಾಗೂ ಇತರ ದೇಶಗಳಲ್ಲಿನ ಜನರು ಸಹಾಯಕ್ಕೆ ಎದುರು ನೋಡುತ್ತಿದ್ದಾರೆ. ಅವರು ಅಂಥ ಕಠಿಣ ಪರಿಸ್ಥಿತಿ ಎದುರಿಸುತ್ತಿರುವಾಗ ನಾವು ಲಸಿಕೆಯನ್ನು ಗೋದಾಮುಗಳಲ್ಲಿ ಸಂಗ್ರಹಿಸಿ ಇಡುವುದು ಸರಿಯಲ್ಲ’ ಎಂದೂ ಅವರು ಹೇಳಿದ್ದಾರೆ.</p>.<p>‘ಕಳೆದ ಕೆಲವು ತಿಂಗಳಲ್ಲಿ ಗಳಿಸಿದ್ದ ಒಳ್ಳೆಯ ಹೆಸರನ್ನು ಬೈಡನ್ ಆಡಳಿತ ಈಗ ಕಳೆದುಕೊಳ್ಳುತ್ತಿದೆ’ ಎಂದು ಬ್ರೂಕಿಂಗ್ಸ್ ಇನ್ಸ್ಟಿಟ್ಯೂಟ್ನ ತನ್ವಿ ಮದನ್ ಟ್ವೀಟ್ ಮಾಡಿದ್ದಾರೆ.</p>.<p>‘ಭಾರತದಲ್ಲಿ ನನ್ನ ಕುಟುಂಬದ ಐವರು ಸದಸ್ಯರನ್ನು ಕೋವಿಡ್ನಿಂದಾಗಿ ಕಳೆದುಕೊಂಡಿದ್ದೇನೆ’ ಎಂದು ಬೈಡನ್ ಪರ ಚುನಾವಣೆಯಲ್ಲಿ ಪ್ರಚಾರ ಕೈಗೊಂಡಿದ್ದ ಭಾರತೀಯ ಅಮೆರಿಕನ್ ಸೋನಾಲ್ ಶಾ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಾಷಿಂಗ್ಟನ್: </strong>ಕೋವಿಡ್–19 ಪ್ರಕರಣಗಳು ಹೆಚ್ಚಿ, ಸಂಕಷ್ಟದಲ್ಲಿರುವ ಭಾರತಕ್ಕೆ ತನ್ನಲ್ಲಿನ ಹೆಚ್ಚುವರಿ ಲಸಿಕೆಯನ್ನು ಒದಗಿಸದಿರುವ ಅಧ್ಯಕ್ಷ ಜೋ ಬೈಡನ್ ಆಡಳಿತದ ನಿಲುವಿಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ.</p>.<p>ಆಡಳಿತಾರೂಢ ಡೆಮಾಕ್ರಟಿಕ್ ಪಕ್ಷದ ಮುಖಂಡರೂ ಸೇರಿದಂತೆ ವಿವಿಧ ಕ್ಷೇತ್ರಗಳ ನಾಯಕರು ಬೈಡನ್ ಆಡಳಿತದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>‘ಕೋವಿಡ್–19 ವಿರುದ್ಧ ಹೋರಾಡುತ್ತಿರುವ ಭಾರತ ಸೇರಿದಂತೆ ಇತರ ರಾಷ್ಟ್ರಗಳಿಗೆ ಅಸ್ಟ್ರಾಜೆನೆಕಾ ಕಂಪನಿಯ ಲಸಿಕೆಯನ್ನು ನೀಡಬೇಕು’ ಎಂದು ಭಾರತೀಯ ಅಮೆರಿಕನ್ ಸಂಸದ ರಾಜಾ ಕೃಷ್ಣಮೂರ್ತಿ ಒತ್ತಾಯಿಸಿದ್ದಾರೆ.</p>.<p>’ಭಾರತ ಹಾಗೂ ಇತರ ದೇಶಗಳಲ್ಲಿನ ಜನರು ಸಹಾಯಕ್ಕೆ ಎದುರು ನೋಡುತ್ತಿದ್ದಾರೆ. ಅವರು ಅಂಥ ಕಠಿಣ ಪರಿಸ್ಥಿತಿ ಎದುರಿಸುತ್ತಿರುವಾಗ ನಾವು ಲಸಿಕೆಯನ್ನು ಗೋದಾಮುಗಳಲ್ಲಿ ಸಂಗ್ರಹಿಸಿ ಇಡುವುದು ಸರಿಯಲ್ಲ’ ಎಂದೂ ಅವರು ಹೇಳಿದ್ದಾರೆ.</p>.<p>‘ಕಳೆದ ಕೆಲವು ತಿಂಗಳಲ್ಲಿ ಗಳಿಸಿದ್ದ ಒಳ್ಳೆಯ ಹೆಸರನ್ನು ಬೈಡನ್ ಆಡಳಿತ ಈಗ ಕಳೆದುಕೊಳ್ಳುತ್ತಿದೆ’ ಎಂದು ಬ್ರೂಕಿಂಗ್ಸ್ ಇನ್ಸ್ಟಿಟ್ಯೂಟ್ನ ತನ್ವಿ ಮದನ್ ಟ್ವೀಟ್ ಮಾಡಿದ್ದಾರೆ.</p>.<p>‘ಭಾರತದಲ್ಲಿ ನನ್ನ ಕುಟುಂಬದ ಐವರು ಸದಸ್ಯರನ್ನು ಕೋವಿಡ್ನಿಂದಾಗಿ ಕಳೆದುಕೊಂಡಿದ್ದೇನೆ’ ಎಂದು ಬೈಡನ್ ಪರ ಚುನಾವಣೆಯಲ್ಲಿ ಪ್ರಚಾರ ಕೈಗೊಂಡಿದ್ದ ಭಾರತೀಯ ಅಮೆರಿಕನ್ ಸೋನಾಲ್ ಶಾ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>