ದೇಶದೊಳಗಿನ ಆಂತರಿಕ ಸಮಸ್ಯೆಗಳು ಹಾಗೂ ಆರ್ಥಿಕ ಬಿಕ್ಕಟ್ಟು ಪರಿಹರಿಸುವುದರ ಕಡೆ ಹೆಚ್ಚಿನ ಗಮನ ಕೇಂದ್ರೀಕರಿಸುವ ಉದ್ದೇಶದಿಂದ ಶೃಂಗಸಭೆಯಲ್ಲಿ ಪಾಲ್ಗೊಳ್ಳದಿರಲು ಸುನಕ್ ನಿರ್ಧರಿಸಿದ್ದರು. ಈ ಸಂಬಂಧ ಅವರ ಕಾರ್ಯಾಲಯ ಪ್ರಕಟಣೆ ಹೊರಡಿಸಿತ್ತು. ಸುನಕ್ ಅವರ ತೀರ್ಮಾನಕ್ಕೆ ಭಾರಿ ಟೀಕೆ ವ್ಯಕ್ತವಾಗಿತ್ತು. ಹೀಗಾಗಿ ಅವರು ತೀರ್ಮಾನ ಬದಲಿಸಿದ್ದಾರೆ.