ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೇಪಾಳದಲ್ಲಿ ನದಿಗೆ ಬಸ್‌ ಉರುಳಿ 22 ಪ್ರಯಾಣಿಕರ ಸಾವು

Last Updated 13 ಅಕ್ಟೋಬರ್ 2021, 3:33 IST
ಅಕ್ಷರ ಗಾತ್ರ

ಕಠ್ಮಂಡು: ನೇಪಾಳದ ರಾರಾ ಸರೋವರಕ್ಕೆ ಖ್ಯಾತಿಯಾದ ಮುಗು ಜಿಲ್ಲೆಯಲ್ಲಿ ಮಂಗಳವಾರ ಬಸ್‌ವೊಂದು ನದಿಗೆ ಉರುಳಿಬಿದ್ದು 22 ಪ್ರಯಾಣಿಕರು ಸಾವನ್ನಪ್ಪಿದ್ದು, 16 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನೇಪಾಳಗುಂಜ್‌ನಿಂದ ಮುಗು ಜಿಲ್ಲೆಯ ಜಿಲ್ಲಾ ಕೇಂದ್ರವಾದ ಗಾಮಗಧಿಯತ್ತ ತೆರಳುತ್ತಿದ್ದ ಬಸ್ ಛಾಯನಾಥ ರಾರಾ ಪುರಸಭೆ ವ್ಯಾಪ್ತಿಯಲ್ಲಿರುವ ಪಿನಾ ಝ್ಯಾರಿ ನದಿಗೆ ಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಜಯ ದಶಮಿ ಹಬ್ಬ ಆಚರಿಸಲು ದೇಶದ ವಿವಿಧ ಭಾಗಗಳಿಂದ ಮನೆಗೆ ಮರಳುತ್ತಿದ್ದ ಅನೇಕ ಪ್ರಯಾಣಿಕರು ಈ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು. ರಕ್ಷಣಾ ಕಾರ್ಯಾಚರಣೆಗೆ ನೇಪಾಳ ಸೇನೆಯ ಹೆಲಿಕಾಪ್ಟರ್ ಅನ್ನು ಸುರಖೇಟಿನಿಂದ ಅಪಘಾತ ನಡೆದ ಸ್ಥಳಕ್ಕೆ ಕಳುಹಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT