ಕೊಲಂಬೊ: ಶ್ರೀಲಂಕಾದಲ್ಲಿ ಬಸ್ವೊಂದು ಪ್ರಪಾತಕ್ಕೆ ಉರುಳಿ ಬಿದ್ದ ಪರಿಣಾಮ 14 ಮಂದಿ ಮೃತಪಟ್ಟು, 30 ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ಶನಿವಾರ ಸಂಭವಿಸಿದೆ.
‘ಮಧ್ಯ ಶ್ರೀಲಂಕಾದ ಪಸ್ಸಾರಾ ಪಟ್ಟಣ ಬಳಿಯ ಪ್ರಪಾತಕ್ಕೆ ಬಸ್ ಉರುಳಿ ಬಿದ್ದಿದೆ’ ಎಂದು ಪೊಲೀಸರು ತಿಳಿಸಿದರು.
‘ಚಾಲಕನ ನಿರ್ಲಕ್ಷ್ಯದಿಂದ ಈ ಅಪಘಾತ ಸಂಭವಿಸಿದೆ ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಘಟನೆಯಲ್ಲಿ ಚಾಲಕ ಬದುಕುಳಿದಿದ್ದಾನೆಯೇ ಎಂಬುದರ ಬಗ್ಗೆ ಸ್ಪಷ್ಟತೆಯಿಲ್ಲ’ ಎಂದು ಪೊಲೀಸರ ವಕ್ತಾರ ಅಜಿತ್ ರೋಹಾನಾ ಮಾಹಿತಿ ನೀಡಿದರು.
‘ಈ ಬಸ್ಸಿನಲ್ಲಿ 70 ಕ್ಕೂ ಹೆಚ್ಚು ಪ್ರಯಾಣಿಕರು ಇದ್ದರು’ ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ.