‘ಭಾರತೀಯರನ್ನು ಕರೆತರಲು ಪೋಲೆಂಡ್, ಹಂಗೇರಿಗಳಿಂದ ವಿಮಾನಗಳ ಕಾರ್ಯಾಚರಣೆ ನಡೆಸಲಾಗುತ್ತಿದೆ. ಆದರೆ, ರೊಮೇನಿಯಾದಿಂದ ಕಾರ್ಯಾಚರಣೆ ನಡೆಸುತ್ತಿಲ್ಲ. ಉಕ್ರೇನ್ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ಪೈಕಿ ಹಲವು ಹೆಣ್ಣುಮಕ್ಕಳೂ ಇದ್ದಾರೆ. ಅವರಿಗೆ ಯಾವುದೇ ಸೌಕರ್ಯ ನೀಡಲಾಗಿಲ್ಲ’ಎಂದು ಅರ್ಜಿದಾರರ ಪರ ವಕೀಲರು ವಾದಿಸಿದ್ದಾರೆ.