ಮಾರ್ಚ್ 12ರಂದು ಎಂಟು ಮಂದಿ ಭಾರತೀಯ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ವ್ಯಾನ್ ಮತ್ತು ಟ್ರ್ಯಾಕ್ಟರ್ ನಡುವೆ ಅಪಘಾತ ಸಂಭವಿಸಿ, ಐವರು ಮೃತಪಟ್ಟಿದ್ದರು. ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವ್ಯಾನ್ನಲ್ಲಿ ಇದ್ದ ಮತ್ತೊಬ್ಬ ವಿದ್ಯಾರ್ಥಿ ಪಾರಾಗಿದ್ದಾನೆ ಎಂದು ರಾಯಭಾರಿ ಕಚೇರಿಯ ಅಧಿಕಾರಿ ಅಜಯ್ ಬಿಸಾರಿಯಾ ತಿಳಿಸಿದ್ದಾರೆ.