ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆನಡಾದದಲ್ಲಿ ಅಪಘಾತ: ಮೂವರು ಭಾರತೀಯರು ಅಪಾಯದಿಂದ ಪಾರು

Last Updated 15 ಮಾರ್ಚ್ 2022, 12:32 IST
ಅಕ್ಷರ ಗಾತ್ರ

ಟೊರೊಂಟೊ: ಕೆನಡಾದ ಒಂಟಾರಿಯಾ ಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಭಾರತದ ಮೂವರು ವಿದ್ಯಾರ್ಥಿಗಳು ಅಪಾಯದಿಂದ ಪಾರಾಗಿದ್ದಾರೆ ಎಂದು ಭಾರತದ ರಾಯಭಾರಿ ಕಚೇರಿ ತಿಳಿಸಿದೆ.

ಮಾರ್ಚ್‌ 12ರಂದು ಎಂಟು ಮಂದಿ ಭಾರತೀಯ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ವ್ಯಾನ್‌ ಮತ್ತು ಟ್ರ್ಯಾಕ್ಟರ್‌ ನಡುವೆ ಅಪಘಾತ ಸಂಭವಿಸಿ, ಐವರು ಮೃತಪಟ್ಟಿದ್ದರು. ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವ್ಯಾನ್‌ನಲ್ಲಿ ಇದ್ದ ಮತ್ತೊಬ್ಬ ವಿದ್ಯಾರ್ಥಿ ಪಾರಾಗಿದ್ದಾನೆ ಎಂದು ರಾಯಭಾರಿ ಕಚೇರಿಯ ಅಧಿಕಾರಿ ಅಜಯ್‌ ಬಿಸಾರಿಯಾ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT