ವ್ಯೂಹಾತ್ಮಕವಾಗಿ ಪ್ರಾಮುಖ್ಯತೆ ಪಡೆದಿರುವ ಮಾರಿಯುಪೋಲ್ ಮೇಲೆ ರಷ್ಯಾ ಕೆಲವು ದಿನಗಳಿಂದ ನಿರಂತರ ದಾಳಿ ಕೈಗೊಂಡಿತ್ತು. ನಗರಕ್ಕೆ ನೀರು, ವಿದ್ಯುತ್ ಕಡಿತಗೊಂಡು, ಜನ ಪರದಾಡುವಂತಾಗಿತ್ತು. ಈ ಹಿನ್ನೆಲೆಯಲ್ಲಿ, ಮಾನವೀಯ ಪರಿಹಾರ ಕಾರ್ಯ ಕೈಗೊಳ್ಳಲು ಅವಕಾಶ ನೀಡಬೇಕು ಎಂದು ಮಾರಿಯುಪೋಲ್ ಮೇಯರ್ ಆಗ್ರಹಿಸಿದ್ದರು.