ಸಾವೊಪೌಲೊ, ಬ್ರೆಜಿಲ್: ‘ಚೀನಾವು ಭಾರತದ ಜೊತೆಗಿನ ಗಡಿ ಒಪ್ಪಂದಗಳನ್ನು ಕಡೆಗಣಿಸುತ್ತಿದೆ. ಆ ಮೂಲಕ ದ್ವಿಪಕ್ಷೀಯ ಬಾಂಧವ್ಯದ ಮೇಲೆ ಕರಿ ನೆರಳು ಆವರಿಸುವಂತೆ ಮಾಡುತ್ತಿದೆ’ ಎಂದು ವಿದೇಶಾಂಗ ಸಚಿವ ಎಸ್.ಜೈಶಂಕರ್ ಭಾನುವಾರ ಹೇಳಿದ್ದಾರೆ.
‘1990ರ ಒಪ್ಪಂದದ ಪ್ರಕಾರ, ಗಡಿ ಭಾಗದಲ್ಲಿ ಯಾರೂ ಸೇನಾ ತುಕಡಿ ನಿಯೋಜಿಸುವಂತಿಲ್ಲ. ಈ ನಿಯಮವನ್ನು ಚೀನಾ ಉಲ್ಲಂಘಿಸಿದೆ. ಕೆಲ ವರ್ಷಗಳ ಹಿಂದೆ ಗಾಲ್ವನ್ ಕಣಿವೆಯಲ್ಲಿ ನಡೆದ ಕಾದಾಟದಲ್ಲಿ ಹಲವು ಯೋಧರು ಹುತಾತ್ಮರಾಗಿದ್ದರು. ಆ ಸಮಸ್ಯೆ ಇನ್ನೂ ಬಗೆಹರಿದಿಲ್ಲ’ ಎಂದಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.