<p><strong>ಬೀಜಿಂಗ್:</strong> ಪಾಕಿಸ್ತಾನದಲ್ಲಿ ಸಂಭವಿಸಿದ ಬಸ್ ದುರಂತದ ಬಗ್ಗೆ ತನಿಖೆ ನಡೆಸಲು ವಿಶೇಷ ತಂಡವನ್ನು ಚೀನಾ ಕಳುಹಿಸಿದೆ. 'ಭಯೋತ್ಪಾದಕರ ದಾಳಿ' ಎಂದಿರುವ ಚೀನಾ ತನ್ನ 'ನಂಬಿಕಸ್ಥ ರಾಷ್ಟ್ರ'ದ ಮೇಲೆಯೇ ಅನುಮಾನದ ದೃಷ್ಟಿಯನ್ನು ನೆಟ್ಟಿದೆ.</p>.<p>ಕಳೆದ ಬುಧವಾರ ಪಾಕಿಸ್ತಾನದಲ್ಲಿ ನಡೆದಿದ್ದ ಬಸ್ ದುರಂತದಲ್ಲಿ ಚೀನಾದ 9 ಎಂಜಿನಿಯರ್ಗಳೂ ಸೇರಿದಂತೆ 13 ಮಂದಿ ಮೃತಪಟ್ಟಿದ್ದರು. ಬಸ್ ಸ್ಫೋಟಗೊಂಡು ಸಂಭವಿಸಿದ ಈ ಪ್ರಕರಣವು ಭಯೋತ್ಪಾದಕ ದಾಳಿಯೋ ಅಥವಾ ಅನಿಲ ಸೋರಿಕೆಯಿಂದ ಉಂಟಾದ ಸ್ಫೋಟವೋ ಎಂಬುದರ ಬಗ್ಗೆ ಮಿತ್ರರಾಷ್ಟ್ರಗಳು ಭಿನ್ನಾಭಿಪ್ರಾಯ ಹೊಂದಿವೆ.</p>.<p>ನಿರ್ಮಾಣ ಹಂತದಲ್ಲಿದ್ದ ದಾಸು ಅಣೆಕಟ್ಟು ಇರುವ ಸ್ಥಳಕ್ಕೆ ಚೀನಾದ ಎಂಜಿನಿಯರ್ಗಳು ಮತ್ತು ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಬಸ್ ಸ್ಫೋಟಗೊಂಡು ಚೀನಾದ 9 ಪ್ರಜೆಗಳು ಮತ್ತು ಇಬ್ಬರು ಸೈನಿಕರು ಸೇರಿದಂತೆ ಕನಿಷ್ಠ 13 ಜನರು ಸಾವನ್ನಪ್ಪಿದರು. ಅಲ್ಲದೆ, 39 ಮಂದಿ ಗಾಯಗೊಂಡಿದ್ದರು. ಸ್ಫೋಟದ ನಂತರ ಬಸ್ ಆಳವಾದ ಕಂದಕಕ್ಕೆ ಉರುಳಿ ಬಿದ್ದಿತ್ತು.</p>.<p><a href="https://www.prajavani.net/world-news/wild-pigs-boar-one-of-the-most-damaging-invasive-species-on-earth-here-is-the-reason-849906.html" itemprop="url">ಕಾಡು ಹಂದಿಗಳಿಂದ ಪರಿಸರ ಮಾಲಿನ್ಯ: 10 ಲಕ್ಷ ಕಾರು ಉಗುಳುವ ಹೊಗೆಗೆ ಸಮ! </a></p>.<p>'ಚೀನಾ ಮತ್ತು ಪಾಕಿಸ್ತಾನ ಜೊತೆಯಾಗಿ ಸತ್ಯಾನ್ವೇಷಣೆ ನಡೆಸಲಿವೆ' ಎಂದು ಚೀನಾದ ಸಾರ್ವಜನಿಕ ಭದ್ರತಾ ಸಚಿವ ಝಾವೊ ಕೆಝಿ ಪಾಕಿಸ್ತಾನದ ಮಂತ್ರಿ ಜೊತೆ ದೂರವಾಣಿಯಲ್ಲಿ ಚರ್ಚಿಸಿದ ಬಳಿಕ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀಜಿಂಗ್:</strong> ಪಾಕಿಸ್ತಾನದಲ್ಲಿ ಸಂಭವಿಸಿದ ಬಸ್ ದುರಂತದ ಬಗ್ಗೆ ತನಿಖೆ ನಡೆಸಲು ವಿಶೇಷ ತಂಡವನ್ನು ಚೀನಾ ಕಳುಹಿಸಿದೆ. 'ಭಯೋತ್ಪಾದಕರ ದಾಳಿ' ಎಂದಿರುವ ಚೀನಾ ತನ್ನ 'ನಂಬಿಕಸ್ಥ ರಾಷ್ಟ್ರ'ದ ಮೇಲೆಯೇ ಅನುಮಾನದ ದೃಷ್ಟಿಯನ್ನು ನೆಟ್ಟಿದೆ.</p>.<p>ಕಳೆದ ಬುಧವಾರ ಪಾಕಿಸ್ತಾನದಲ್ಲಿ ನಡೆದಿದ್ದ ಬಸ್ ದುರಂತದಲ್ಲಿ ಚೀನಾದ 9 ಎಂಜಿನಿಯರ್ಗಳೂ ಸೇರಿದಂತೆ 13 ಮಂದಿ ಮೃತಪಟ್ಟಿದ್ದರು. ಬಸ್ ಸ್ಫೋಟಗೊಂಡು ಸಂಭವಿಸಿದ ಈ ಪ್ರಕರಣವು ಭಯೋತ್ಪಾದಕ ದಾಳಿಯೋ ಅಥವಾ ಅನಿಲ ಸೋರಿಕೆಯಿಂದ ಉಂಟಾದ ಸ್ಫೋಟವೋ ಎಂಬುದರ ಬಗ್ಗೆ ಮಿತ್ರರಾಷ್ಟ್ರಗಳು ಭಿನ್ನಾಭಿಪ್ರಾಯ ಹೊಂದಿವೆ.</p>.<p>ನಿರ್ಮಾಣ ಹಂತದಲ್ಲಿದ್ದ ದಾಸು ಅಣೆಕಟ್ಟು ಇರುವ ಸ್ಥಳಕ್ಕೆ ಚೀನಾದ ಎಂಜಿನಿಯರ್ಗಳು ಮತ್ತು ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಬಸ್ ಸ್ಫೋಟಗೊಂಡು ಚೀನಾದ 9 ಪ್ರಜೆಗಳು ಮತ್ತು ಇಬ್ಬರು ಸೈನಿಕರು ಸೇರಿದಂತೆ ಕನಿಷ್ಠ 13 ಜನರು ಸಾವನ್ನಪ್ಪಿದರು. ಅಲ್ಲದೆ, 39 ಮಂದಿ ಗಾಯಗೊಂಡಿದ್ದರು. ಸ್ಫೋಟದ ನಂತರ ಬಸ್ ಆಳವಾದ ಕಂದಕಕ್ಕೆ ಉರುಳಿ ಬಿದ್ದಿತ್ತು.</p>.<p><a href="https://www.prajavani.net/world-news/wild-pigs-boar-one-of-the-most-damaging-invasive-species-on-earth-here-is-the-reason-849906.html" itemprop="url">ಕಾಡು ಹಂದಿಗಳಿಂದ ಪರಿಸರ ಮಾಲಿನ್ಯ: 10 ಲಕ್ಷ ಕಾರು ಉಗುಳುವ ಹೊಗೆಗೆ ಸಮ! </a></p>.<p>'ಚೀನಾ ಮತ್ತು ಪಾಕಿಸ್ತಾನ ಜೊತೆಯಾಗಿ ಸತ್ಯಾನ್ವೇಷಣೆ ನಡೆಸಲಿವೆ' ಎಂದು ಚೀನಾದ ಸಾರ್ವಜನಿಕ ಭದ್ರತಾ ಸಚಿವ ಝಾವೊ ಕೆಝಿ ಪಾಕಿಸ್ತಾನದ ಮಂತ್ರಿ ಜೊತೆ ದೂರವಾಣಿಯಲ್ಲಿ ಚರ್ಚಿಸಿದ ಬಳಿಕ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>