<p><strong>ಕಠ್ಮಂಡು</strong>: ‘ನೇಪಾಳದಲ್ಲಿ ರಾಜಕೀಯ ಅಸ್ಥಿರತೆ ಮನೆಮಾಡಿರುವ ಹಿನ್ನೆಲೆಯಲ್ಲಿ ಚೀನಾ ಸರ್ಕಾರವು ನಾಲ್ಕು ಸದಸ್ಯರ ತಂಡವೊಂದನ್ನು ಕಠ್ಮಂಡುಗೆ ಕಳುಹಿಸಲು ನಿರ್ಧರಿಸಿದೆ’ ಎಂದು ಸ್ಥಳೀಯ ಮಾಧ್ಯಮಗಳು ಶನಿವಾರ ವರದಿ ಮಾಡಿವೆ.</p>.<p>‘ಚೀನಾ ಕಮ್ಯುನಿಸ್ಟ್ ಪಕ್ಷದ (ಸಿಪಿಸಿ) ಅಂತರರಾಷ್ಟ್ರೀಯ ವಿಭಾಗದ ಉಪಾಧ್ಯಕ್ಷ ಗುವೊ ಯೆಜೊವೊ ನೇತೃತ್ವದ ತಂಡವು ಭಾನುವಾರ ಬೆಳಿಗ್ಗೆ ಕಠ್ಮಂಡು ತಲುಪಲಿದೆ. ಸ್ಥಳೀಯ ಪರಿಸ್ಥಿತಿಯನ್ನು ಅವಲೋಕಿಸಲಿರುವ ತಂಡವು ಆಡಳಿತಾರೂಢ ನೇಪಾಳ ಕಮ್ಯುನಿಸ್ಟ್ ಪಕ್ಷವು (ಎನ್ಸಿಪಿ) ಇಬ್ಭಾಗವಾಗದಂತೆ ತಡೆಯಲು ಪ್ರಯತ್ನಿಸಲಿದೆ. ಈ ವಿಷಯವನ್ನು ಎನ್ಸಿಪಿ ಮುಖಂಡರೇ ಖಾತರಿಪಡಿಸಿದ್ದಾರೆ’ ಎಂದು ಕಠ್ಮಂಡು ಪೋಸ್ಟ್ ದಿನಪತ್ರಿಕೆ ವರದಿ ಮಾಡಿದೆ.</p>.<p>‘ಗುವೊ ನೇತೃತ್ವದ ತಂಡವು ಕಠ್ಮಂಡುಗೆ ಭೇಟಿ ನೀಡುತ್ತಿರುವ ವಿಷಯವನ್ನು ನಮ್ಮ ಗಮನಕ್ಕೆ ತರಲಾಗಿದೆ’ ಎಂದು ಎನ್ಸಿಪಿಯ ಪುಷ್ಪ ಕಮಲ್ ದಹಾಲ್ (ಪ್ರಚಂಡ) ಬಣದ ನಾಯಕ ಹಾಗೂ ವಿದೇಶಾಂಗ ವ್ಯವಹಾರಗಳ ಇಲಾಖೆಯ ಉಪಾಧ್ಯಕ್ಷ ವಿಷ್ಣು ರಿಜಾಲ್ ತಿಳಿಸಿದ್ದಾರೆ.</p>.<p>ಈ ಸಂಬಂಧ ನೇಪಾಳದಲ್ಲಿರುವ ಚೀನಾದ ದೂತವಾಸ ಕಚೇರಿಯಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.</p>.<p>ಪ್ರಧಾನಿ ಕೆ.ಪಿ.ಶರ್ಮಾ ಒಲಿ ಹಾಗೂ ಹಾಗೂ ಪ್ರಚಂಡ ಅವರ ನಡುವೆ ಅಧಿಕಾರಕ್ಕಾಗಿ ತಿಕ್ಕಾಟ ನಡೆಯುತ್ತಿತ್ತು. ಈ ಹಿನ್ನೆಲೆಯಲ್ಲಿ ಒಲಿ ಅವರು ಹೋದ ಭಾನುವಾರ ಸಂಸತ್ ವಿಸರ್ಜಿಸುವಂತಹ ಅಚ್ಚರಿಯ ತೀರ್ಮಾನ ಕೈಗೊಂಡಿದ್ದರು. ಅವರ ನಡೆಯನ್ನು ಅನೇಕರು ಟೀಕಿಸಿದ್ದರು. ಈ ಸಂಬಂಧ ಲಿಖಿತ ವಿವರಣೆ ನೀಡುವಂತೆ ನೇಪಾಳ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಶುಕ್ರವಾರ ಷೋಕಾಸ್ ನೋಟಿಸ್ ಜಾರಿಗೊಳಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಠ್ಮಂಡು</strong>: ‘ನೇಪಾಳದಲ್ಲಿ ರಾಜಕೀಯ ಅಸ್ಥಿರತೆ ಮನೆಮಾಡಿರುವ ಹಿನ್ನೆಲೆಯಲ್ಲಿ ಚೀನಾ ಸರ್ಕಾರವು ನಾಲ್ಕು ಸದಸ್ಯರ ತಂಡವೊಂದನ್ನು ಕಠ್ಮಂಡುಗೆ ಕಳುಹಿಸಲು ನಿರ್ಧರಿಸಿದೆ’ ಎಂದು ಸ್ಥಳೀಯ ಮಾಧ್ಯಮಗಳು ಶನಿವಾರ ವರದಿ ಮಾಡಿವೆ.</p>.<p>‘ಚೀನಾ ಕಮ್ಯುನಿಸ್ಟ್ ಪಕ್ಷದ (ಸಿಪಿಸಿ) ಅಂತರರಾಷ್ಟ್ರೀಯ ವಿಭಾಗದ ಉಪಾಧ್ಯಕ್ಷ ಗುವೊ ಯೆಜೊವೊ ನೇತೃತ್ವದ ತಂಡವು ಭಾನುವಾರ ಬೆಳಿಗ್ಗೆ ಕಠ್ಮಂಡು ತಲುಪಲಿದೆ. ಸ್ಥಳೀಯ ಪರಿಸ್ಥಿತಿಯನ್ನು ಅವಲೋಕಿಸಲಿರುವ ತಂಡವು ಆಡಳಿತಾರೂಢ ನೇಪಾಳ ಕಮ್ಯುನಿಸ್ಟ್ ಪಕ್ಷವು (ಎನ್ಸಿಪಿ) ಇಬ್ಭಾಗವಾಗದಂತೆ ತಡೆಯಲು ಪ್ರಯತ್ನಿಸಲಿದೆ. ಈ ವಿಷಯವನ್ನು ಎನ್ಸಿಪಿ ಮುಖಂಡರೇ ಖಾತರಿಪಡಿಸಿದ್ದಾರೆ’ ಎಂದು ಕಠ್ಮಂಡು ಪೋಸ್ಟ್ ದಿನಪತ್ರಿಕೆ ವರದಿ ಮಾಡಿದೆ.</p>.<p>‘ಗುವೊ ನೇತೃತ್ವದ ತಂಡವು ಕಠ್ಮಂಡುಗೆ ಭೇಟಿ ನೀಡುತ್ತಿರುವ ವಿಷಯವನ್ನು ನಮ್ಮ ಗಮನಕ್ಕೆ ತರಲಾಗಿದೆ’ ಎಂದು ಎನ್ಸಿಪಿಯ ಪುಷ್ಪ ಕಮಲ್ ದಹಾಲ್ (ಪ್ರಚಂಡ) ಬಣದ ನಾಯಕ ಹಾಗೂ ವಿದೇಶಾಂಗ ವ್ಯವಹಾರಗಳ ಇಲಾಖೆಯ ಉಪಾಧ್ಯಕ್ಷ ವಿಷ್ಣು ರಿಜಾಲ್ ತಿಳಿಸಿದ್ದಾರೆ.</p>.<p>ಈ ಸಂಬಂಧ ನೇಪಾಳದಲ್ಲಿರುವ ಚೀನಾದ ದೂತವಾಸ ಕಚೇರಿಯಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.</p>.<p>ಪ್ರಧಾನಿ ಕೆ.ಪಿ.ಶರ್ಮಾ ಒಲಿ ಹಾಗೂ ಹಾಗೂ ಪ್ರಚಂಡ ಅವರ ನಡುವೆ ಅಧಿಕಾರಕ್ಕಾಗಿ ತಿಕ್ಕಾಟ ನಡೆಯುತ್ತಿತ್ತು. ಈ ಹಿನ್ನೆಲೆಯಲ್ಲಿ ಒಲಿ ಅವರು ಹೋದ ಭಾನುವಾರ ಸಂಸತ್ ವಿಸರ್ಜಿಸುವಂತಹ ಅಚ್ಚರಿಯ ತೀರ್ಮಾನ ಕೈಗೊಂಡಿದ್ದರು. ಅವರ ನಡೆಯನ್ನು ಅನೇಕರು ಟೀಕಿಸಿದ್ದರು. ಈ ಸಂಬಂಧ ಲಿಖಿತ ವಿವರಣೆ ನೀಡುವಂತೆ ನೇಪಾಳ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಶುಕ್ರವಾರ ಷೋಕಾಸ್ ನೋಟಿಸ್ ಜಾರಿಗೊಳಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>