<p><strong>ಇಸ್ಲಾಮಾಬಾದ್</strong>: 'ಪಾಕಿಸ್ತಾನದಲ್ಲಿ ಶೀಘ್ರವೇ ಕೊರೊನಾ ನಾಲ್ಕನೇ ಅಲೆ ಕಾಣಿಸಿಕೊಳ್ಳುವ ಎಲ್ಲ ಲಕ್ಷಣಗಳು ಗೋಚರಿಸುತ್ತಿವೆ‘ ಎಂದು ಯೋಜನಾ ಖಾತೆ ಸಚಿವ ಅಸಾದ್ ಉಮರ್ ಅಭಿಪ್ರಾಯಪಟ್ಟಿದ್ದಾರೆ.</p>.<p>ಕೋವಿಡ್–19ನಿಯಂತ್ರಣಕ್ಕಾಗಿ ರಚಿಸಿರುವ ನ್ಯಾಷನಲ್ ಕಮಾಂಡ್ ಅಂಡ್ ಆಪರೇಷನ್ ಸೆಂಟರ್ (ಎನ್ಸಿಒಸಿ) ಮುಖ್ಯಸ್ಥರೂ ಆಗಿರುವ ಉಮರ್ ಅವರು ಈ ಕುರಿತು ಟ್ವೀಟ್ ಮಾಡಿದ್ದಾರೆ.</p>.<p>‘ಸಾರ್ವಜನಿಕರು ಕೋವಿಡ್–19 ಪ್ರಮಾಣಿತ ಕಾರ್ಯಾಚರಣೆಯ ವಿಧಾನಗಳನ್ನು(ಎಸ್ಒಪಿ) ಅನುಸರಿಸುತ್ತಿಲ್ಲ. ಜತೆಗೆ, ಡೆಲ್ಟಾ ರೂಪಾಂತರ ಸೋಂಕು ವ್ಯಾಪಕವಾಗುತ್ತಿದೆ. ಈ ಎಲ್ಲ ಅಂಶಗಳನ್ನು ಗಮನಿಸಿದರೆ ನಾಲ್ಕನೇ ಅಲೆಯ ಆರಂಭದ ಸ್ಪಷ್ಟ ಲಕ್ಷಣಗಳು ಕಾಣಿಸುತ್ತಿವೆ’ ಎಂದು ಎಚ್ಚರಿಕೆ ನೀಡಿದ್ದಾರೆ.</p>.<p>‘ಜನರು ಕೋವಿಡ್ ಮಾರ್ಗಸೂಚಿಗಳನ್ನು ಸರಿಯಾಗಿ ಪಾಲಿಸುತ್ತಿಲ್ಲ ಎಂದು ವರದಿಗಳು ಹೇಳುತ್ತಿವೆ. ಹೀಗೆ ನಿಯಮಗ ಳನ್ನು ಉಲ್ಲಂಘಿಸುತ್ತಿದ್ದರೆ, ಸರ್ಕಾರ ಕಲ್ಯಾಣ ಮಂಟಪ, ರೆಸ್ಟೋರೆಂಟ್ ಮತ್ತು ಜಿಮ್ಗಳನ್ನು ಬಲವಂತವಾಗಿ ಬಂದ್ ಮಾಡಿಸಲಿದೆ‘ ಎಂದು ಅವರು ಎಚ್ಚರಿಸಿದ್ದಾರೆ.</p>.<p>‘ಕೃತಕ ಬುದ್ಧಿಮತ್ತೆ ಆಧಾರಿತ ರೋಗ ಮಾದರಿ ವಿಶ್ಲೇಷಣೆಗಳು ಪಾಕಿಸ್ತಾನದಲ್ಲಿ ಕೋವಿಡ್ ನಾಲ್ಕನೇ ಅಲೆ ಆರಂಭವಾಗುವ ಸೂಚನೆಯನ್ನು ನೀಡುತ್ತಿವೆ ಎಂದು ನಾನು ಎರಡು ವಾರಗಳ ಹಿಂದೆ ಟ್ವೀಟ್ ಮಾಡಿದ್ದೆ‘ ಎಂದು ಅವರು ಟ್ವೀಟ್ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಸ್ಲಾಮಾಬಾದ್</strong>: 'ಪಾಕಿಸ್ತಾನದಲ್ಲಿ ಶೀಘ್ರವೇ ಕೊರೊನಾ ನಾಲ್ಕನೇ ಅಲೆ ಕಾಣಿಸಿಕೊಳ್ಳುವ ಎಲ್ಲ ಲಕ್ಷಣಗಳು ಗೋಚರಿಸುತ್ತಿವೆ‘ ಎಂದು ಯೋಜನಾ ಖಾತೆ ಸಚಿವ ಅಸಾದ್ ಉಮರ್ ಅಭಿಪ್ರಾಯಪಟ್ಟಿದ್ದಾರೆ.</p>.<p>ಕೋವಿಡ್–19ನಿಯಂತ್ರಣಕ್ಕಾಗಿ ರಚಿಸಿರುವ ನ್ಯಾಷನಲ್ ಕಮಾಂಡ್ ಅಂಡ್ ಆಪರೇಷನ್ ಸೆಂಟರ್ (ಎನ್ಸಿಒಸಿ) ಮುಖ್ಯಸ್ಥರೂ ಆಗಿರುವ ಉಮರ್ ಅವರು ಈ ಕುರಿತು ಟ್ವೀಟ್ ಮಾಡಿದ್ದಾರೆ.</p>.<p>‘ಸಾರ್ವಜನಿಕರು ಕೋವಿಡ್–19 ಪ್ರಮಾಣಿತ ಕಾರ್ಯಾಚರಣೆಯ ವಿಧಾನಗಳನ್ನು(ಎಸ್ಒಪಿ) ಅನುಸರಿಸುತ್ತಿಲ್ಲ. ಜತೆಗೆ, ಡೆಲ್ಟಾ ರೂಪಾಂತರ ಸೋಂಕು ವ್ಯಾಪಕವಾಗುತ್ತಿದೆ. ಈ ಎಲ್ಲ ಅಂಶಗಳನ್ನು ಗಮನಿಸಿದರೆ ನಾಲ್ಕನೇ ಅಲೆಯ ಆರಂಭದ ಸ್ಪಷ್ಟ ಲಕ್ಷಣಗಳು ಕಾಣಿಸುತ್ತಿವೆ’ ಎಂದು ಎಚ್ಚರಿಕೆ ನೀಡಿದ್ದಾರೆ.</p>.<p>‘ಜನರು ಕೋವಿಡ್ ಮಾರ್ಗಸೂಚಿಗಳನ್ನು ಸರಿಯಾಗಿ ಪಾಲಿಸುತ್ತಿಲ್ಲ ಎಂದು ವರದಿಗಳು ಹೇಳುತ್ತಿವೆ. ಹೀಗೆ ನಿಯಮಗ ಳನ್ನು ಉಲ್ಲಂಘಿಸುತ್ತಿದ್ದರೆ, ಸರ್ಕಾರ ಕಲ್ಯಾಣ ಮಂಟಪ, ರೆಸ್ಟೋರೆಂಟ್ ಮತ್ತು ಜಿಮ್ಗಳನ್ನು ಬಲವಂತವಾಗಿ ಬಂದ್ ಮಾಡಿಸಲಿದೆ‘ ಎಂದು ಅವರು ಎಚ್ಚರಿಸಿದ್ದಾರೆ.</p>.<p>‘ಕೃತಕ ಬುದ್ಧಿಮತ್ತೆ ಆಧಾರಿತ ರೋಗ ಮಾದರಿ ವಿಶ್ಲೇಷಣೆಗಳು ಪಾಕಿಸ್ತಾನದಲ್ಲಿ ಕೋವಿಡ್ ನಾಲ್ಕನೇ ಅಲೆ ಆರಂಭವಾಗುವ ಸೂಚನೆಯನ್ನು ನೀಡುತ್ತಿವೆ ಎಂದು ನಾನು ಎರಡು ವಾರಗಳ ಹಿಂದೆ ಟ್ವೀಟ್ ಮಾಡಿದ್ದೆ‘ ಎಂದು ಅವರು ಟ್ವೀಟ್ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>