ಭೂಪೇಂದರ್ ಯಾದವ್ ಪ್ರಭಾವ: ಶೃಂಗಸಭೆಯಲ್ಲಿ ಭಾರತದ ನಿಲುವನ್ನು ಸ್ಪಷ್ಟವಾಗಿ ತಿಳಿಸಿದ್ದ ಪರಿಸರ ಸಚಿವ ಭೂಪೇಂದರ್ ಯಾದವ್, ಅಭಿವೃದ್ಧಿಶೀಲ ರಾಷ್ಟ್ರಗಳಿಗೆ ದಹನ ಇಂಧನವನ್ನು ಜವಾಬ್ದಾರಿಯಿಂದ ಹೇಗೆ ಬಳಸಬೇಕು ಎಂಬುದು ತಿಳಿದಿದೆ, ಬಡಜನರ ಜೀವನ ಮಟ್ಟ ಸುಧಾರಣೆಗಾಗಿ ಕಲ್ಲಿದ್ದಲನ್ನು ಮುಂದೆಯೂ ಬಳಸುವುದು ಅಗತ್ಯವಾಗಿದೆ. ಆದರೆ ಅದರ ಬಳಕೆಯನ್ನು ಹಂತ ಹಂತವಾಗಿ ಮಿತಗೊಳಿಸಬೇಕಾಗಿದೆ’ ಎಂದು ಹೇಳಿದ್ದರು.