ಭಯೋತ್ಪಾದನೆ ಕುರಿತು ನಗರದಲ್ಲಿ ನಡೆದ ಸಮಾಲೋಚನಾ ಸಮಾವೇಶದಲ್ಲಿ ಮಾತನಾಡಿದ ಚೌಧರಿ, ದೇಶದಲ್ಲಿ ಉಗ್ರವಾದದ ಪ್ರಚಾರ ಮಾಡುವ ಸಲುವಾಗಿಯೇ 80 ಮತ್ತು 90ರ ದಶಕದಲ್ಲಿ ಬೋಧಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿತ್ತು.ಭಾರತ, ಯುಎಸ್ ಅಥವಾ ಇನ್ಯಾವ ದೇಶಗಳಿಂದಲೂ ಪಾಕಿಸ್ತಾನಕ್ಕೆ ಬೆದರಿಕೆ ಇಲ್ಲ. ಆದರೆ, ದೇಶದೊಳಗೇ ಇರುವ ಧಾರ್ಮಿಕ ಉಗ್ರವಾದದಿಂದ ಅಪಾಯ ಎದುರಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.