ಲಾಹೋರ್: ‘ಭಾರತದ ಕ್ಷಿಪಣಿ ತನ್ನ ನೆಲದ ಮೇಲೆ ಬಿದ್ದ ಘಟನೆಗೆ ಪಾಕಿಸ್ತಾನ ಪ್ರತ್ಯುತ್ತರ ನೀಡಬಹುದಿತ್ತು. ಆದರೆ, ಆ ರೀತಿ ಮಾಡದೇ ಸಂಯಮ ತೋರಿದ್ದೇವೆ’ ಎಂದು ಪ್ರಧಾನಿ ಇಮ್ರಾನ್ ಖಾನ್ ಭಾನುವಾರ ಹೇಳಿದ್ದಾರೆ.
ಪಂಜಾಬ್ ಪ್ರಾಂತ್ಯದ ಹಫೀಜಾಬಾದ್ ಜಿಲ್ಲೆಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ‘ನಮ್ಮ ರಕ್ಷಣಾ ವ್ಯವಸ್ಥೆಯನ್ನು ಬಲಪಡಿಸಿಕೊಳ್ಳುವ ಮೂಲಕ ದೇಶವನ್ನು ಬಲಿಷ್ಠಗೊಳಿಸಬೇಕು’ ಎಂದರು.
ಭಾರತ ಸೇನೆಯ ಶರವೇಗದ ಸೂಪರ್ಸಾನಿಕ್ ಕ್ಷಿಪಣಿಯು ಮಾರ್ಚ್ 9ರಂದು ಆಕಸ್ಮಿಕವಾಗಿ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಮಿಯಾನ್ ಚುನ್ನು ನಗರದ ಸಮೀಪ ನೆಲಕ್ಕೆ ಅಪ್ಪಳಿಸಿತ್ತು.